spot_img
spot_img

ವಿದ್ಯಾರ್ಥಿಗಳು ಭಾರತೀಯ ಸಂಸ್ಕೃತಿಯನ್ನು ಅಳವಡಿಸಿಕೊಳ್ಳಿ- ರೇವತಿ  ಮಠದ        

Must Read

spot_img
- Advertisement -

ಮೂಡಲಗಿ: ವಿದ್ಯಾರ್ಥಿಗಳು ಭಾರತೀಯ ಸಂಸ್ಕೃತಿಯನ್ನು ಜೀವನದಲ್ಲಿ ಅಳವಡಿಸಿಕೊಂಡು ಉನ್ನತ ಮಟ್ಟದ ಶಿಕ್ಷಣ ಕಲಿತು  ದೊಡ್ಡ ಹುದ್ದೆಗಳನ್ನು ಅಲಂಕಸಿಕೊಂಡು ಮೇಧಾವಿಗಳಾಗಿರೆಂದು ಜಿಲ್ಲಾ ಉಪ ಯೋಜನಾ ಸಮನ್ವಯ ಅಧಿಕಾರಿ ರೇವತಿ ಮಠದ ಹೇಳಿದರು.

ಅವರು ಹಳ್ಳೂರ ಗ್ರಾಮದ ಬ ಕು ಮ ಪ್ರೌಢ ಶಾಲೆಯಲ್ಲಿ ನಡೆದ 10ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭದ ಮುಖ್ಯ ಅತಿಥಿಯಾಗಿ ಮಾತನಾಡಿ, ಎಸ್ ಎಸ್ ಎಲ್ ಸಿ ಪರೀಕ್ಷೆ ಇದು ಜೀವನದ ತಳಪಾಯವಿದ್ದಂತೆ ಅದನ್ನು ಗಟ್ಟಿಗೊಳಿಸಿದರೆ ಮಾತ್ರ ಜೀವನದಲ್ಲಿ ಸಾಧಿಸುವ ಅವಕಾಶ ಸಿಗುತ್ತದೆ. ವಿದ್ಯಾರ್ಥಿಗಳು ಟಿವಿ ಮೊಬೈಲ್ ಹಾಗೂ ದುಷ್ಟ ಚಟಗಳಿಗೆ ಬಲಿಯಾಗಿ ಜೀವನ ಹಾಳು ಮಾಡಿಕೊಳ್ಳದೆ  ಕೆಟ್ಟವರ ಸಂಘ ಮಾಡದೆ ಸನ್ಮಾರ್ಗದಲ್ಲಿ ಸಾಗಿರಿ ತಂದೆ ತಾಯಿ ಗುರು ಹಿರಿಯರ ಮಾರ್ಗದರ್ಶನದಲ್ಲಿ ನಡೆದು ಜೀವನ ಉದ್ದಾರ ಮಾಡಿಕೊಳ್ಳಿರೆಂದು ಹೇಳಿದರು.

ಮುಖ್ಯೋಪಾಧ್ಯಾಯ ಎಂ ಎನ್ ಕುಲಕರ್ಣಿ ಮಾತನಾಡಿ 10ನೇ ತರಗತಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಈ ಸಮಯದಲ್ಲಿ ಸಂಸ್ಥೆಯ ಕಾರ್ಯದರ್ಶಿ ಸುಲಭಾ ಕುಲಕರ್ಣಿ, ನಿವೃತ್ತ ಶಿಕ್ಷಕ ಪಿ ಎಸ್ ಈರಡ್ಡಿ, ಮುರಿಗೆಪ್ಪ ಮಾಲಗಾರ, ಆರ್ ಎಂ ತೆಲಸಂಗ, ಎಂ ಟಿ ದಡ್ಡಿಮನಿ, ಎಸ್ ಎಲ್ ಪೂಜೇರಿ, ಎಂ ಟಿ ಪಟಾಣಿ, ವಿ ಎಸ್ ನಾರಾಯಣಕರ ಸೇರಿದಂತೆ ಗ್ರಾಮದ ಗುರು ಹಿರಿಯರು ಶಾಲೆಯ ಸಿಬ್ಬಂದಿಗಳು,ಆಡಳಿತ ಮಂಡಳಿ, ಹಾಗೂ ವಿದ್ಯಾರ್ಥಿಗಳಿದ್ದರು.

- Advertisement -

LEAVE A REPLY

Please enter your comment!
Please enter your name here

- Advertisement -

Latest News

ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಕನ್ನಡ ನುಡಿ ವೈಭವ ಕಾರ್ಯಕ್ರಮ

ಕರ್ನಾಟಕ ರಾಜ್ಯ ಬರಹಗಾರರ ಸಂಘ(ರಿ) ಹೂವಿನ ಹಡಗಲಿ, ಈ ಸಂಘವು ರಾಜ್ಯದ ೩೦ ಜಿಲ್ಲೆಗಳಲ್ಲಿ ಜಿಲ್ಲಾ ಘಟಕ ಸ್ಥಾಪನೆ ಮಾಡಿದ್ದು ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗಿದೆ....
- Advertisement -

More Articles Like This

- Advertisement -
close
error: Content is protected !!
Join WhatsApp Group