- Advertisement -
ಸಿಂದಗಿ; ಕರ್ನಾಟಕ ರಾಜ್ಯ ಕಾರ್ಯ ನಿರತ ಪತ್ರಕರ್ತರ ಸಂಘದ 2022ರಿಂದ 25ರ ವರೆಗೆ ಪದಾಧಿಕಾರಿಗಳ ಚುನಾವಣೆ ಪ್ರಕ್ರಿಯೆಯಲ್ಲಿ ತಾಲೂಕಾಧ್ಯಕ್ಷರಾಗಿ ಆನಂದ ಶಾಬಾದಿ, ಉಪಾದ್ಯಕ್ಷರಾಗಿ ಮಲ್ಲಿಕಾರ್ಜುನ ಅಲ್ಲಾಪುರ, ಪ್ರಧಾನ ಕಾರ್ಯದರ್ಶಿಯಾಗಿ ಭೀಮರಾಯ ಕೆಂಬಾವಿ ಆಯ್ಕೆಯಾಗಿದ್ದಾರೆ.
ಅಲ್ಲದೆ ಕಾರ್ಯದರ್ಶಿಯಾಗಿ ಚಂದ್ರಶೇಖರ ಮಾವೂರ, ಖಜಾಂಚಿಯಾಗಿ ವಿಜಯಕುಮಾರ ಪತ್ತಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಜಿಲ್ಲಾ ಉಪಾಧ್ಯಕ್ಷ ಇಂದುಶೇಖರ ಮಣ್ಣೂರ ಘೋಷಣೆ ಮಾಡಿದರು.