- Advertisement -
ಬೀದರ – ಬೀದರ ಉತ್ತರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸೂರ್ಯಕಾಂತ್ ನಾಗಮಾರಪಳ್ಳಿ ಚುನಾವಣಾಧಿಕಾರಿ ಲವೀಶ್ ಒಡಿಯಾಗೆ ತಮ್ಮ ನಾಮಪತ್ರ ಸಲ್ಲಿಸಿದರು.
ಬಿಜೆಪಿಯಿಂದ ಟಿಕೆಟ್ ಸಿಗದೆ ನಿರಾಶರಾಗಿದ್ದ ಸೂರ್ಯಕಾಂತ ಬಂಡಾಯವೆದ್ದು ಜೆಡಿಎಸ್ ಸೇರ್ಪಡೆಯಾಗಿ ಆ ಪಕ್ಷದಿಂದ ನಾಮಪತ್ರ ಸಲ್ಲಿಸಿದರು.
ಸೂರ್ಯಾಕಾಂತ ಅವರಿಗೆ ಜೆಡಿಎಸ್ ನಾಯಕ ಬಂಡೆಪ್ಪ ಖಾಶೆಂಪೂರ್ ಸೇರಿದಂತೆ ಪಕ್ಷದ ಮುಖಂಡರು ಸಾಥ್ ನೀಡಿದರು ನಾಮಪತ್ರ ಸಲ್ಲಿಕೆಗೂ ಮುನ್ನ ನಗರದಲ್ಲಿ ಬೃಹತ್ ರ್ಯಾಲಿ ನಡೆಸಲಾಯಿತು.
- Advertisement -
ಬೃಹತ್ ರ್ಯಾಲಿಯಲ್ಲಿ ಸಾವಿರಾರು ಜನ ಜೆಡಿಎಸ್ ಕಾರ್ಯಕರ್ತರು ಭಾಗಿಯಾದರು. ಈ ಸಂದರ್ಭದಲ್ಲಿ ಜೆಡಿಎಸ್ ಅಭ್ಯರ್ಥಿಯ ಸೋದರ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಭರ್ಜರಿ ಡ್ಯಾನ್ಸ್ ಮಾಡಿದರು.
ವರದಿ: ನಂದಕುಮಾರ ಕರಂಜೆ, ಬೀದರ