ಮಕ್ಕಳ ಪ್ರತಿಭೆಯನ್ನು ಶಿಕ್ಷಕರು ಅನಾವರಣಗೊಳಿಸಬೇಕು

Must Read

ಸಿಂದಗಿ-ಮಕ್ಕಳಲ್ಲಿರುವ ಸುಪ್ತ ಶಕ್ತಿಯನ್ನು ಹೊರಸೂಸುವ ಸಾಮರ್ಥ್ಯ ಶಿಕ್ಷಕರಲ್ಲಿದೆ ಅದನ್ನು ಸೃಜನಶೀಲತೆಯಿಂದ ಹೊರ ಹಾಕಿ ಅವರ ಪ್ರತಿಭೆಯನ್ನು ಅನಾವರಣಗೊಳಿಸಬೇಕು ಎಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಹ.ಮ.ಪೂಜಾರ ಹೇಳಿದರು.

ಪಟ್ಟಣದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡ ಶಿಕ್ಷಕರ ದಿನಾಚಾರಣೆಯಲ್ಲಿ ಭಾಗವಹಿಸಿ ಮಾತನಾಡಿ, ಶಿಕ್ಷಕರ ಬೋಧನೆ ಪರಿಣಾಮಕಾರಿಯಾಗಲು ನಿರಂತರ ಅಧ್ಯಯನ, ಪ್ರಸ್ತುತ ಜ್ಞಾನ, ಅನುಭವ ಮತ್ತು ಬೋಧನೆಯ ಮಾರ್ಗಗಳು ಹೆಚ್ಚು ಅವಶ್ಯವಾಗಿವೆ. ಇಂದಿನ ವೈಜ್ಞಾನಿಕ ಜಗತ್ತಿಗೆ ನಮ್ಮ ಮಕ್ಕಳು ಹೊಂದಿಕೊಳ್ಳಲು ಪ್ರತಿ ಬೋಧನೆಗೆ ವಿಜ್ಞಾನದ ಸಹಕಾರ ಅಗತ್ಯವಾಗಿದೆ ಎಂದರು.

ಈ ಸಂದರ್ಭದಲ್ಲಿ ಪ್ರಶಿಕ್ಷಣಾರ್ಥಿ ವಿಶಾಲಾಕ್ಷೀ ಬಜಂತ್ರಿ, ಮಹಾವೀರ ಕಕ್ಕಳಮೇಲಿ ಮಾತನಾಡಿದರು. ಈ ವೇಳೆ ಶಿಕ್ಷಕರ ದಿನಾಚಾರಣೆಯ ಪ್ರಯುಕ್ತ ಏರ್ಪಡಿಸಿದ ವಿವಿಧ ಸ್ಪರ್ಧೆಯಲ್ಲಿ ವಿಜೇತರಾದ ಉಪನ್ಯಾಸಕರಿಗೆ ಬಹುಮಾನ ವಿತರಿಸಲಾಯಿತು.

ಅಧ್ಯಕ್ಷತೆ ವಹಿಸಿದ ಪಾಚಾರ್ಯ ಜೆ.ಸಿ.ನಂದಿಕೋಲ ಮಾತನಾಡಿ, ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರವಾದ ವೃತ್ತಿ. ಸಮಾಜ ಶಿಕ್ಷಕರಿಗೆ ಅತ್ಯಂತ ಹಿರಿಯ ಸ್ಥಾನಮಾನಗಳನ್ನು ನೀಡಿದೆ ಅದನ್ನು ಉಳಿಸಿಕೊಂಡು ಹೋಗುವ ಜವಾಬ್ದಾರಿಯಾಗಬೇಕು. ಜಗತ್ತು ಶಿಕ್ಷಣದ ಮೇಲೆ ನಿಂತಿದೆ. ಸೂಕ್ತ ಶಿಕ್ಷಣ ಸೂಕ್ತ ಶಿಕ್ಷಕ ಜಗತ್ತನ್ನು ವ್ಯವಸ್ಥಿತವಾದ ರೀತಿಯಲ್ಲಿ ಬದಲಾಯಿಸಬಲ್ಲದು ಎಂದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ಡಾ.ಶರಣಬಸವ ಜೋಗೂರ, ದಾನಯ್ಯ ಮಠಪತಿ. ಸುಧಾಕರ ಚವ್ಹಾಣ, ಪಿ.ಸಿ.ಕುಲಕರ್ಣಿ, ಸಿದ್ದಲಿಂಗ ಕಿಣಗಿ, ಆರ್.ಎ.ಹಾಲಕೇರಿ, ಸಿ.ಜಿ.ಕತ್ತಿ, ವಿದ್ಯಾ ಮೋಗಲಿ, ಎಸ್.ಕೆ.ಕತ್ತಿ ಸೇರಿದಂತೆ ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.

- Advertisement -
- Advertisement -

Latest News

ಕವನ : ಸಮರದ ಮಾತು

ಸಮರದ ಮಾತು ಅದೆಷ್ಟು ಇವೆ ನಿನ್ನ ಮಾತಿನ ಸಮರದ ಬಾಣಗಳು ಎದೆಯ ಗುಂಡಿಗೆಯನು ಸೀಳಿ ನಿಂತಿವೆವೀರ ಪರಾಕ್ರಮದ ಕೂಸೂ ನಾನಲ್ಲ ನಿನ್ನ ಜೊತೆ ಹೋರಾಡಿ ಜಯಿಸುವ ಶಕ್ತಿಯೂ ನನ್ನಲಿಲ್ಲ ಏಕೆಂದರೆಆ ಶಕ್ತಿ ಎಲ್ಲವನ್ನೂ ಕಿತ್ತು ಕೊಂಡ ವೀರ ಯೋಧ ಮಾತಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group