Homeಸುದ್ದಿಗಳುಜೊಲ್ಲೆ ಮೇಲಿನ ಆರೋಪದ ಬಗ್ಗೆ ತನಿಖೆಯಾಗಬೇಕು - ಸತೀಶ ಜಾರಕಿಹೊಳಿ

ಜೊಲ್ಲೆ ಮೇಲಿನ ಆರೋಪದ ಬಗ್ಗೆ ತನಿಖೆಯಾಗಬೇಕು – ಸತೀಶ ಜಾರಕಿಹೊಳಿ

ಗೋಕಾಕ – ಶಾಲಾ ಮಕ್ಕಳಿಗೆ ನೀಡುವ ಮೊಟ್ಟೆ ಕಾಂಟ್ರಾಕ್ಟ್ ನೀಡುವ ಹಗರಣದಲ್ಲಿ ಹೆಸರು ಕೇಳಿಬಂದಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆಯವರ ವಿರುದ್ಧ ತನಿಖೆಯಾಗಬೇಕು. ಈಗಲೇ ಅವರಿಗೆ ಸಚಿವ ಸ್ಥಾನ ನೀಡಿದ್ದರಿಂದ ಅವರು ಇನ್ನಷ್ಟು ಬಲಿಷ್ಠರಾಗುತ್ತಾರೆ. ಸಚಿವರಾಗುವ ಮುಂಚೆಯೇ ಝೀರೋ ಟ್ರಾಫಿಕ್ ನಲ್ಲಿ ಪ್ರಮಾಣ ವಚನಕ್ಕೆ ಬಂದಿರುವುದು ಅವರ ಧೋರಣೆ ತೋರಿಸುತ್ತದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು.

ಗೋಕಾಕದ ಹಿಲ್ ಗಾರ್ಡನ್ ನಲ್ಲಿ ಪತ್ರಕರ್ತರೊಡನೆ ಮಾತನಾಡಿದ ಅವರು, ದೊಡ್ಡ ಜಿಲ್ಲೆಯಾದ ಬೆಳಗಾವಿಗೆ ಇನ್ನೂ ಹೆಚ್ಚು ಸಚಿವ ಸ್ಥಾನ ನೀಡಬೇಕಾಗಿತ್ತು. ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಇನ್ನೂ ಹೆಚ್ಚಿನ ಸ್ಥಾನಗಳನ್ನು ಬೆಳಗಾವಿಗೆ ನೀಡಲು ನಾವು ಒತ್ತಾಯ ಮಾಡುತ್ತೇವೆ ಎಂದರು.

ಸರ್ಕಾರ ಇನ್ನು ಕೆಲವೇ ತಿಂಗಳು ಮಾತ್ರ ಇರುವುದರಿಂದ ಜಿಲ್ಲೆಗೆ ಹೆಚ್ಚಿನ ಪ್ರಾತಿನಿಧ್ಯ ನೀಡುವರೋ ಇಲ್ಲವೋ ಗೊತ್ತಿಲ್ಲ ಎಂದು ಸತೀಶ ನುಡಿದರು.

RELATED ARTICLES

Most Popular

error: Content is protected !!
Join WhatsApp Group