ದಿ. ೫ ರಂದು ಅರುಣ ಸಿಂಗ್ ಸಿಂದಗಿಗೆ

Must Read

ಸಿಂದಗಿ: ನಗರಕ್ಕೆ ದಿನಾಂಕ ೮ ರಂದು ಮಧ್ಯಾಹ್ನ — ೩ ಗಂಟೆಗೆ ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳು ಹಾಗೂ ರಾಜ್ಯ ಉಸ್ತುವಾರಿ ಅರುಣಸಿಂಗ್ ಅವರು ಬ್ರಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲು ಆಗಮಿಸಲಿದ್ದಾರೆ ಆದ ಕಾರಣ ಅ. 0೫ ಶನಿವಾರದಂದು ಮದ್ಯಾಹ್ನ ೩-00 ಗಂಟೆಗೆ ಪಕ್ಷದ ಕಾರ್ಯಾಲಯದಲ್ಲಿ ಪೂರ್ವ ಸಿದ್ದತಾ ಸಭೆ ಕರೆಯಲಾಗಿದೆ ಎಂದು  ಮಂಡಲ ಅಧ್ಯಕ್ಷರಾದ ಈರಣ್ಣ ರಾವುರ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಈ ಸಭೆಗೆ ಶಾಸಕ ರಮೇಶ ಬಾ. ಭೂಸನೂರ, ಬೆಳಗಾವಿ ವಿಭಾಗದ ಪ್ರಭಾರಿ ಚಂದ್ರಶೇಖರ ಕವಟಗಿ, ಬೆಳಗಾವಿ ವಿಭಾಗದ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಕಾಶ ಅಕ್ಕಲಕೋಟ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಶಿವರುದ್ರ ಬಾಗಲಕೋಟ, ಮಲ್ಲಿಕಾರ್ಜುನ ಜೋಗೂರ, ಬಸವರಾಜ ಬಿರಾದಾರ ಹಾಗೂ ಮಂಡಲ ಪ್ರಭಾರಿ ಚಿದಾನಂದ ಚಲವಾದಿ ರವರು ಆಗಮಿಸಿ ಪೂರ್ವಸಿದ್ದತಾ ಸಭೆ ತೆಗೆದುಕೊಳ್ಳಲಿದ್ದಾರೆ.

ಆದ ಕಾರಣ ಪಕ್ಷದ ಎಲ್ಲಾ ಪದಾಧಿಕಾರಿಗಳು, ಜನಪ್ರತಿನಿಧಿಗಳು, ನಾಮ ನಿರ್ದೇಶನ ಸದಸ್ಯರು, ಪ್ರಮುಖರು ಹಾಗೂ ಕಾರ್ಯಕರ್ತರು ಆಗಮಿಸಬೇಕೆಂದು ತಿಳಿಸಿದ್ದಾರೆ.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group