spot_img
spot_img

ಟಿಕೆಟ್ ಕೈ ತಪ್ಪಿದ್ದಕ್ಕೆ ಕಣ್ಣೀರಿಟ್ಟ ಕಾಂಗ್ರೆಸ್ ಆಕಾಂಕ್ಷಿ

Must Read

- Advertisement -

ಬೀದರ – ಗಂಡ ಸತ್ತ ಹೆಣ್ಣು ಮಗಳಿಗೆ ಕಾಂಗ್ರೆಸ್ ಪಕ್ಷ  ಅನ್ಯಾಯ ಮಾಡಿದೆ. ಗಂಡ ಸತ್ತವಳ ಮೇಲೆ ಈ ರೀತಿ‌ ಪ್ರಹಾರ ಮಾಡ್ತಾರೆ ಅನ್ಕೊಂಡಿರಲಿಲ್ಲ ಎಂದು ಬಸವಕಲ್ಯಾಣದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ,ದಿ. ಬಿ ನಾರಾಯಣರಾವ್ ಅವರ ಪತ್ನಿ ಮಾಲಾ ಅಳಲು ತೋಡಿಕೊಂಡರು.

ಬಸವಕಲ್ಯಾಣದ ಟಿಕೆಟ್ ಕೈತಪ್ಪಿದ ಬೆನ್ನಲ್ಲೆ ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟ ಅವರು ಕಾಂಗ್ರೆಸ್ ಪಕ್ಷ ನನಗೆ ಈ ರೀತಿ ಅನ್ಯಾಯ ಮಾಡುತ್ತದೆ ಎಂದು ಅಂದ್ಕೊಂಡಿರಲಿಲ್ಲ ಎಂದರು.

ಬಸವಕಲ್ಯಾಣ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ ಪುತ್ರ ವಿಜಯ್‌ಸಿಂಗ್‌ಗೆ ಪಕ್ಷದ ಟಿಕೆಟ್ ನೀಡಿದ್ದಕ್ಕೆ ಮಾಲಾ ನಾರಾಯಾಣರಾವ್ ಆಕ್ರೋಶ ವ್ಯಕ್ತಪಟಿಸಿದರಲ್ಲದೆ ಪತ್ರಿಕಾಗೋಷ್ಠಿಯಲ್ಲಿ ಕಣ್ಣೀರಿಟ್ಟು ತಮ್ಮ ಪತಿಯನ್ನು ನೆನೆದರು.

- Advertisement -

 ತಮಗೆ ಟಿಕೆಟ್ ತಪ್ಪಿದ್ದಕ್ಕೆ ಕಾರಣ ಏನು ಎಂಬ ಪ್ರಶ್ನೆಗೆ, ಬೇರೆಯವರ ಹತ್ತಿರ ದುಡ್ಡಿದೆ ನನ್ನ ಹತ್ತಿರ ಇಲ್ಲ ಎಂದ ಅವರು, ದುಡ್ಡಿಗಾಗಿ ಬೇರೆಯವರ ಪರವಾಗಿ ಕೆಲಸ ಮಾಡುತ್ತೇನೆ ಎಂದು ಹೇಳುತ್ತಾರೆ ಆದರೆ ನನ್ನನ್ನು ಖರೀದಿಸುವ ಗಂಡು ಈ ದೇಶದಲ್ಲೇ ಹುಟ್ಟಿಲ್ಲ. ನಾನು ಮಾರಾಟಕ್ಕಿಲ್ಲ ಎಂದು ಅಗಲಿದ ಪತಿಯ ಮೇಲೆ ಆಣೆ ಮಾಡಿದರು.

ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವ ಕುರಿತು ಇಂಗಿತ ವ್ಯಕ್ತಪಡಿಸಿದ ಮಾಲಾ ನಾರಾಯಣರಾವ್ ಈ ಬಗ್ಗೆ ಕ್ಷೇತ್ರದ ಜನತೆಯ ಜೊತೆ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದರು.


ವರದಿ: ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

ಕವನ : ಮಳೆರಾಯನಿಗೆ ಕೈ ಮುಗಿಯುತ್ತ

ಮಳೆರಾಯನಿಗೆ ಕೈ ಮುಗಿಯುತ್ತ ಎಲ್ಲಿದ್ದೋ ಮಳಿರಾಯ?? ಬಾ ಅಂದಾಗ ಬರಲೆ ಇಲ್ಲ. ಸುರಿ ಅಂದಾಗ ಸುರಿಲೇ ಇಲ್ಲ. ರೈತರ ಕಣ್ಣು ಆಕಾಶದಾಗ ಬಿತ್ತಿದ ಬೀಜ ಭೂಮಿ ಒಳಗ.. ಎಲ್ಲಿದ್ದೋ ಮಳೆರಾಯ?? ಬಾ ಅಂದಾಗ ಬರಲೇ ಇಲ್ಲ ಕಾದ...
- Advertisement -

More Articles Like This

- Advertisement -
close
error: Content is protected !!
Join WhatsApp Group