Homeಸುದ್ದಿಗಳುಆಜಾದಿ ಕಾ ಮಹೋತ್ಸವ ಪ್ರಯುಕ್ತ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ

ಆಜಾದಿ ಕಾ ಮಹೋತ್ಸವ ಪ್ರಯುಕ್ತ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ

ಬೀದರ: ಬೀದರ್ ಜಿಲ್ಲೆಯಾದ್ಯಂತ ಆಜಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಹರ್ ಘರ್ ತಿರಂಗಾ ( ಮನೆ ಮನೆಗೂ ತ್ರಿವರ್ಣ ಧ್ವಜ ) ಅಭಿಯಾನದಲ್ಲಿ ಬೀದರ್ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಸೈಕಲ್ ಜಾಥಾಕ್ಕೆ ಚಾಲನೆ ನೀಡಿದರು.

ಬೀದರ್ ಜಿಲ್ಲೆಯಾದ್ಯಂತ ಭಾಲ್ಕಿ ಔರಾದ ಹುಮನಬಾದ ಬಸವಕಲ್ಯಾಣ ತಾಲೂಕಿನಲ್ಲಿ ಸ್ವತಂತ್ರ ಭಾರತದ 75 ನೇ ವರ್ಷಾಚರಣೆ ಮಹೋತ್ಸವ ಪ್ರಯುಕ್ತ ಆಜಾದಿ ಕಾ ಅಮೃತ್ ಮಹೋತ್ಸವ ಅಂಗವಾಗಿ ಸೈಕಲ್ ಜಾಥಾಕ್ಕೆ ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಚಾಲನೆ ನೀಡಿದರು. ಜಿಲ್ಲಾ ವರಿಷ್ಠ ಪೊಲೀಸ್ ಅಧಿಕಾರಿ ಕಿಶೋರ್ ಬಾಬು ಮತ್ತು ಶಾಲೆಯ ಮಕ್ಕಳು ಈ ಸೈಕಲ್ ಜಾಥಾದಲ್ಲಿ ಭಾಗವಹಿಸಿದ್ದರು.

ಜಿಲ್ಲಾ ಅಧಿಕಾರಿ ಕಾರ್ಯಾಲಯದಿಂದ ಹೊರಟ ಸೈಕಲ್ ಸವಾರಿ ಬೀದರನ ಪ್ರಮುಖ ರಸ್ತೆ ಮುಖಾಂತರ ಬಸವೇಶ್ವರ ವೃತ್ತ, ಅಂಬೇಡ್ಕರ್ ವೃತ್ತದಿಂದ ನೆಹರು ಸ್ಟೇಡಿಯಂ ತಲಪಿತು.


ವರದಿ: ನಂದಕುಮಾರ ಕರಂಜೆ, ಬೀದರ

RELATED ARTICLES

Most Popular

error: Content is protected !!
Join WhatsApp Group