spot_img
spot_img

ಪರೀಕ್ಷೆ ಯಶಸ್ವಿಯಾಗಿ ಮುಗಿಯಲಿದೆ – ಡಿಡಿಪಿಐ ಮೆನ್ನಿಕೇರಿ

Must Read

- Advertisement -

ಮೂಡಲಗಿ: ದಿ.೧೯ ರಂದು ನಡೆದ ಪರೀಕ್ಷೆ ಎಲ್ಲ ರೀತಿಯಿಂದಲೂ ಯಶಸ್ವಿಯಾಗಿದ್ದು ಇವತ್ತಿನ ಪರೀಕ್ಷೆ ಕೂಡ ಯಶಸ್ವಿಯಾಗಲಿದೆ ಎಂದು ಡಿಡಿಪಿಐ ಗಜಾನನ ಮನ್ನಿಕೇರಿ ಹೇಳಿದರು.

ಮೂಡಲಗಿ ತಾಲೂಕಿನ ಕಲ್ಲೋಳಿ, ನಾಗನೂರ ಹಾಗೂ ಮೂಡಲಗಿ ಪಟ್ಟಣದ ಪರೀಕ್ಷಾ ಕೇಂದ್ರಕ್ಕೆ ಭೇಟಿ ನೀಡಿದ ನಂತರ ಎಸ್. ಎಸ್. ಆರ್ ಶಾಲೆಯಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವಂತ ೮ ಶೈಕ್ಷಣಿಕ ವಲಯಗಳಲ್ಲಿ ೪೫೦೨೩ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಮೊದಲಿನ ಪರೀಕ್ಷೆಯು ಅತ್ಯುತ್ತಮವಾಗಿ ಮುಗಿದಿದೆ. ಅದೇ ರೀತಿಯಾಗಿ ಗುರುವಾರ ಎರಡನೇ ದಿನದ ಪರೀಕ್ಷೆ ಯಶಸ್ವಿಯಾಗಿ ನಡೆಯಲಿವೆ ಎಂದರು.

- Advertisement -

ಶೈಕ್ಷಣಿಕ ಜಿಲ್ಲೆಯ ವ್ಯಾಪ್ತಿಯಲ್ಲಿ ಮಳೆಯಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರಗಳಿಗೆ ಬಂದು ಹೋಗಲು ಸ್ವಲ್ಪ ತೊಂದರೆ ಉಂಟಾಗಿದ್ದರೂ ಕೂಡ ಎಲ್ಲ ಮಕ್ಕಳು ನಿಗದಿತ ಸಮಯಕ್ಕೆ ಹಾಜರಾಗಿ ಹುರುಪಿನಿಂದ ಪರೀಕ್ಷೆಯನ್ನು ಬರೆಯುತ್ತಿದ್ದಾರೆ ಎಂದರು.

ಚಿಕ್ಕೋಡಿ ಶೈಕ್ಷಣಿಕ ವ್ಯಾಪ್ತಿಯಲ್ಲಿ ಬರುವ ೨೨೧ ಪರೀಕ್ಷಾ ಕೇಂದ್ರಗಳಲ್ಲಿ ಕಳೆದ ಪರೀಕ್ಷೆಯು ಹಾಗೂ ಇವತ್ತಿನ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ವಿದ್ಯಾರ್ಥಿಗಳಲ್ಲಿ ಕೋವಿಡ್ ಲಕ್ಷಣಗಳು ಕಂಡುಬಂದಿಲ್ಲ. ಆದರೂ ಕೂಡ ಪ್ರತಿಯೊಂದು ಪರೀಕ್ಷಾ ಕೇಂದ್ರಗಳಲ್ಲಿ ವಿಶೇಷ ಕೊಠಡಿಯನ್ನು ಕರೆಯಲಾಗಿದ್ದು, ಸುದೈವವಶಾತ್ ಯಾವುದೇ ಹಂತದ ಪ್ರಕಾರಗಳು ಕಂಡುಬಂದಿಲ್ಲ ಎಂದು ತಿಳಿಸಿದರು.

- Advertisement -
- Advertisement -

Latest News

ದಿನಕ್ಕೊಬ್ಬ ಶರಣ ಮಾಲಿಕೆ

ಕಿನ್ನರಿ ಬ್ರಹ್ಮಯ್ಯ ........................................... 12ನೇ ಶತಮಾನದ ಬಸವಾದಿ ಶಿವಶರಣರ ಕೀರ್ತಿವಾರ್ತೆಯನ್ನು ಕೇಳಿ ಪ್ರಭಾವಿತರಾಗಿ ನಾಡು ಹೊರನಾಡಿನಿಂದ ಅನೇಕ ಜನ ಶರಣರು ಕಲ್ಯಾಣಕ್ಕೆ ಬರಹತ್ತಿದರು. ಬಸವಣ್ಣನವರ ಸಮಕಾಲೀನರಾಗಿದ್ದ ಶರಣರಾದ ಗುಜರಾತದಿಂದ...
- Advertisement -

More Articles Like This

- Advertisement -
close
error: Content is protected !!
Join WhatsApp Group