ಬೀದರ – ಬೀದರ್ ಜಿಲ್ಲೆಯಲ್ಲಿ ತಿಂಗಳಿಗೊಬ್ಬ ಅಧಿಕಾರಿ ವರ್ಗಾವಣೆ ಆಗುತ್ತಿದ್ದಾರೆ.ಅಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ರಾಜ್ಯ ಸರ್ಕಾರ ತೊಡಗಿಕೊಂಡಿದೆ ಎಂದು ಕಾಂಗ್ರೆಸ್ ಶಾಸಕ ರಾಜಶೇಖರ ಪಾಟೀಲ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಬೀದರ್ ನ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಟ್ರಾನ್ಸಫರ್ ಬಿಸಿನೆಸ್ ಮಾಡಿಕೊಂಡಿದ್ದು ಬೀದರ್ ಮೆಡಿಕಲ್ ಕಾಲೇಜಿನ ನಿರ್ದೇಶಕರ ಹುದ್ದೆಗೆ 40 ಲಕ್ಷ ರೂಪಾಯಿ ತಗೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು. ಬಿಜೆಪಿ ನಾಯಕರು ಹಣಕ್ಕಾಗಿ ಅಧಿಕಾರಿಗಳ ವರ್ಗಾವಣೆ ದಂಧೆ ಮಾಡಿಕೊಂಡಿದ್ದಾರೆ. ಅಧಿಕಾರಿಗಳ ವರ್ಗಾವಣೆಯಿಂದ ಅಭಿವೃದ್ಧಿ ಕುಂಠಿತಗೊಳ್ಳುತ್ತಿದೆ ಎಂದರು.
ಹುಮನಾಬಾದ್ ಮತ್ತು ಚಿಟಗುಪ್ಪ ಇಒ ಗಳ ಸಾಲು ಸಾಲು ವರ್ಗಾವಣೆಯಾಗಿದೆ ಎಂದು ಆರೋಪ ಮಾಡಿದ ಹುಮನಾಬಾದ ಕಾಂಗ್ರೆಸ್ ಶಾಸಕ ಪಾಟೀಲ ಅವರು, ಈ ಬಗ್ಗೆ ನಾನು ಬಹಿರಂಗವಾಗಿ ಹೇಳಬಲ್ಲೆ ಎಂದರು.
ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ