ಸಾರ್ವಕಾಲಿಕ ಶ್ರೇಷ್ಠ ವ್ಯಕ್ತಿ ಗುರು – ಪ್ತೊ.ಬೀಳಗಿ

Must Read

ಸಿಂದಗಿ: ಸಾರ್ವಕಾಲಿಕ ಶ್ರೇಷ್ಠ ವ್ಯಕ್ತಿ ಎಂದರೆ ಗುರು. ಗುರುವಿನಿಂದಲೆ ಮೋಕ್ಷ ಗುರುವಿನಿಂದಲೆ ಸಾಧನೆ ಒಬ್ಬ ಒಳ್ಳೆ ಗುರು ದೊರೆತರೆ ಬಾಳಿಗೊಂದು ಊರುಗೊಲು ಸಿಕ್ಕಂತೆ ಎಂದು ಪ್ರೊ. ಎಸ್ ವಾಯ್ ಬೀಳಗಿ ಹೇಳಿದರು.

ಪಟ್ಟಣದ ಪಿಇಎಸ್ ಸಂಸ್ಥೆಯಲ್ಲಿ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದಿಂದ ಮಾನ್ಯತೆ ಪಡೆದು ನೂತನವಾಗಿ ಪ್ರಾರಂಭಿಸಲಾದ ಶ್ರೀಮತಿ ಪ್ರೇಮಾ ಭೀ ಕರ್ಜಗಿ ಕಲಾ ಹಾಗೂ ವಾಣಿಜ್ಯ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಂಡಿರುವ ಗುರುಪೂರ್ಣಿಮಾ ಸರಳ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಸಂಸ್ಥೆಯ ಗೌರವ ಕಾರ್ಯದರ್ಶಿ ಬಿ ಪಿ ಕರ್ಜಗಿಯವರು ಮಾತನಾಡಿ, ಗುರುವಿನ ಮೌಲ್ಯ ಹಾಗೂ ಗುರುವಿನ ಮಹತ್ವದ ಕುರಿತು ತಿಳಿಸಿದರು.

ಸಂಸ್ಥೆಯ ಆಡಳಿತಾಧಿಕಾರಿ, ಆಯ್ ಬಿ ಬಿರಾದಾರ ಮಾರ್ಗದರ್ಶಕ ಕೆ.ಹೆಚ್. ಸೋಮಾಪೂರ, ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಜಿ.ಎಸ್.ಕಡಣಿ ಪ.ಪೂ ಮಹಾವಿದ್ಯಾಲಯದ ಪ್ರಾಚಾರ್ಯ ಆರ್ ಬಿ ಗೋಡಕರ ಉಪನ್ಯಾಸಕರಾದ ಹೆಚ್ ಎಸ್ ಬಿರಾದಾರ , ವಿ ವಿ ಪಾಟೀಲ ಮತ್ತು ಬೋಧಕೇತರ ಸಿಬ್ಬಂದಿಗಳಾದ ಎಮ್ ಸಿ ಹೊಸಮನಿ, ಜಿ.ಎಮ್.ಮಿರಗಿ ಉಪಸ್ಥಿತರಿದ್ದರು.

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group