- Advertisement -
ಸವದತ್ತಿ: ಸವದತ್ತಿ ಹಾಗೂ ರಾಮದುರ್ಗ ತಾಲೂಕು ವ್ಯಾಪ್ತಿಯ ಕೋಟಿವೃಕ್ಷ ಆಂದೋಲನದ ಡಿಯಲ್ಲಿ ಕೈಗೊಂಡ ಕೆಲಸಗಳನ್ನು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ದರ್ಶನ ಎಚ್ ವಿ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದರು..
ಸವದತ್ತಿ ತಾಲೂಕು ವ್ಯಾಪ್ತಿಯ ಮುಗಳಿಹಾಳ. ದಾಸನಾಳ. ಸತ್ತಿಗೇರಿ, ಸೊಪ್ಪಡ್ಲ,ಹಾಗೂ ಯರಗಣವಿ ವ್ಯಾಪ್ತಿಯಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಹಾಗೂ ಗ್ರಾಮ ಪಂಚಾಯತ್ ಸಹಯೋಗದಲ್ಲಿ ನಿರ್ಮಿಸಲಾದ ನೆಡುತೋಪು ಗಳನ್ನು ಪರಿವೀಕ್ಷಿಸಿದರು..
ಈ ಸಂದರ್ಭದಲ್ಲಿ ಸಾಮಾಜಿಕ ಅರಣ್ಯ ಇಲಾಖೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಂಕರ ಕಲ್ಲೊಳಿಕರ್, ಸಹಾಯಕ ಅರಣ್ಯ ಸಂರಕ್ಷಾಧಿಕಾರಿ ಎಂ ಕೆ ಪಾತ್ರೋಟ, ತಾ ಪಂ ಕಾರ್ಯನಿರ್ವಾಹಕ ಅಧಿಕಾರಿ ಯಶವಂತ ಕುಮಾರ ಸಹಾಯಕ ನಿರ್ದೇಶಕ ಸಂಗನಗೌಡ ಹಂದ್ರಾಳ ವಲಯ ಅರಣ್ಯಾಧಿಕಾರಿ,ಶಂಕರ ಅಂತರಗಟ್ಟಿ, ಸಾಮಾಜಿಕ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯತ್ ಸಿಬ್ಬಂದಿ ಉಪಸ್ಥಿತರಿದ್ದರು