ಶಾಲೆ ಎಂದರೆ ಶಿಕ್ಷಣ ಜೊತೆಗೆ ಬದುಕುವ ನೀತಿ ಪಾಠ ಕಲಿಸುವ ದೇಗುಲ- ಶಿಕ್ಷಕ ಕಬ್ಬೂರ ಅಭಿಮತ

Must Read

ಸವದತ್ತಿ– “ಶಾಲೆ ಎಂದರೆ ಶಿಕ್ಷಣ ಕಲಿಸುವುದರ ಜೊತೆಗೆ ಬದುಕುವ ನೀತಿ ಪಾಠವನ್ನೂ ಕಲಿಸುವ ದೇಗುಲ ಇದ್ದಹಾಗೆ ಆದ್ದರಿಂದ ನಾವು ಕಲಿತ ಶಾಲೆ ಮತ್ತು ನಮಗೆ ಅಕ್ಷರ ಕಲಿಸಿದ ಶಿಕ್ಷಕರನ್ನು ಎಂದೂ ಮರೆಯಬಾರದು” ಎಂದು ಶಿಕ್ಷಕ ಎನ್.ಎನ್.ಕಬ್ಬೂರ ತಮ್ಮ ಅಭಿಪ್ರಾಯ ಹಂಚಿಕೊಂಡರು.

ಸ್ಥಳೀಯ ಸ.ಕಿ.ಪ್ರಾ ಕನ್ನಡ ಶಾಲೆ ನಂ-6 ಸವದತ್ತಿಯಲ್ಲಿ 5 ನೇ ತರಗತಿ ಮಕ್ಕಳ ಬೀಳ್ಕೋಡುವ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಶಾಲೆಯಲ್ಲಿ ಕಲಿತ ಶಿಕ್ಷಣ ನಮ್ಮ ನಿತ್ಯ ಜೀವನದಲ್ಲಿ ಉಪಯೋಗಕ್ಕೆ ಬಂದಾಗ ಮಾತ್ರ ಶಿಕ್ಷಣದ ಸಾರ್ಥಕತೆ ಸಾಧ್ಯ ಎಂದು ಅವರು ಹೇಳಿದರು.

ವರ್ಷಪೂರ್ತಿ ಶೈಕ್ಷಣಿಕ ಚಟುವಟಿಕೆಗಳಲ್ಲಿ ಕ್ರೀಯಾಶೀಲತೆಯಿಂದ ಭಾಗವಹಿಸಿದ ಮಕ್ಕಳಿಗೆ ಶಿಕ್ಷಕಿ ಎಮ್.ಆರ್.ಫಂಡಿ ಪುಸ್ತಕಗಳನ್ನು ಬಹುಮಾನವಾಗಿ ನೀಡಿದರು. ನಂತರ ಮಕ್ಕಳಿಂದ ದೀಪದಾನ ಕಾರ್ಯಕ್ರಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.

ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ವಿದ್ಯಾರ್ಥಿಗಳು, ಪಾಲಕರು ಪೋಷಕರು, ಅಡುಗೆ ಸಿಬ್ಬಂದಿಯವರು, ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಇದ್ದರು.

Latest News

ವಿದ್ಯಾರ್ಥಿಗಳು ಮೌಲ್ಯಯುತ ಬದುಕಿಗೆ ಆದ್ಯತೆ ನೀಡಬೇಕು – ಸಂತೋಷ ಬಂಡೆ

ಸಿಂದಗಿ: ಇಂದಿನ ಯುವ ವಿದ್ಯಾರ್ಥಿಗಳು ಪರಿಶ್ರಮ, ಶಿಸ್ತು, ಸಮಯ ಪಾಲನೆ ಹಾಗೂ ನಿರಂತರ ಜ್ಞಾನರ್ಜನೆಯೊಂದಿಗೆ ಮೌಲ್ಯಯುತ ಬದುಕಿಗೆ ಮೊದಲ ಆದ್ಯತೆ ನೀಡಿ ಸದೃಢ ಸಮಾಜ ನಿರ್ಮಾಣ...

More Articles Like This

error: Content is protected !!
Join WhatsApp Group