ಬೀದರ – ಕಾಂಗ್ರೆಸ್ ನಲ್ಲಿ ಹೇಳೋರು ಕೇಳೋರು ಯಾರೂ ಇಲ್ಲ ಅದಕ್ಕೇ ಬಾಯಿಗೆ ಬಂದಂತೆ ಮಾತನಾಡುತ್ತಾರೆ ಎಂದು ಬಿಜೆಪಿ ಮುಖಂಡ ಕೆ ಎಸ್ ಈಶ್ವರಪ್ಪ ಟಾಂಗ್ ಕೊಟ್ಟಿದ್ದಾರೆ.
ಕಾಂಗ್ರೆಸ್ ಮುಂದಿನ ಸಿಎಂ ಅಭ್ಯರ್ಥಿ ಕುರಿತಂತೆ ಕೈ ನಾಯಕರು ನಾ ಮುಂದು ತಾ ಮುಂದು ಎನ್ನುತ್ತ ಹೇಳಿಕೆ ಕೊಡುತ್ತಿರುವ ಪತ್ರಕರ್ತರು ಕೇಳಿದ ಪ್ರಶ್ನೆಗೆ ಈಶ್ವರಪ್ಪ ಈ ಮೇಲಿನಂತೆ ಉತ್ತರಿಸಿದರು.
ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಸದೆ ಸುಮಲತಾ ನಡುವೆ ನಡೆದಿರುವ ವಾಕ್ಸಮರ ಕುರಿತಂತೆ ಕೇಳಿದ ಪ್ರಶ್ನೆಗೆ, ಅವರು ಏನು ಬೇಕಾದರೂ ಚರ್ಚೆ ಮಾಡಲಿ ಆದರೆ ನೋಡಿಕೊಂಡು ಮಾತನಾಡಬೇಕು. ಅವರು ಬಳಸಿದ ಪದಗಳನ್ನು ಕೇಳಿ ತುಂಬಾ ನೋವಾಗುತ್ತಿದೆ ಎಂದರು.
ವರದಿ : ನಂದಕುಮಾರ ಕರಂಜೆ, ಬೀದರ