Homeಸುದ್ದಿಗಳುಶಿವಮೊಗ್ಗದಲ್ಲಿ ಹರ್ಷನ ಪ್ರತಿಮೆ ಆಗಬೇಕು

ಶಿವಮೊಗ್ಗದಲ್ಲಿ ಹರ್ಷನ ಪ್ರತಿಮೆ ಆಗಬೇಕು

ಬೀದರ – ಹಮೇ ಮತ್ ಛೇಡೋ ಹಮ್ ಹಿಂದು ಹೈ ಎಂದು ಹಿರೇಮಠ ಸಂಸ್ಥಾನ ಪೀಠಾಧಿಪತಿ ವೀರರೇಣುಕ ಗಂಗಾಧರ ಸ್ವಾಮೀಜಿ ಘರ್ಜನೆ ಹಾಕಿದರು.

ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷ ಹತ್ಯೆ ಹಿನ್ನೆಲೆಯಲ್ಲಿ ಹುಮನಾಬಾದನಲ್ಲಿ ಹಮ್ಮಿಕೊಳ್ಳಲಾಗಿದ್ದ ಭಾರಿ ಪ್ರತಿಭಟನೆಯನ್ನು ಉದ್ದೇಶಿಸಿ ಅವರು ಮಾತನಾಡುತ್ತ, ರಾಜ್ಯದಲ್ಲಿ ಹಿಂದೂಗಳ ಹತ್ಯೆಯಾಗುತ್ತಿದ್ದು ಇದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆಯ ಗಂಟೆಯಾಗಬೇಕು. ಹುಮನಾಬಾದದಿಂದ ಶಿವಮೊಗ್ಗದವರೆಗೂ ಹಿಂದೂ ಯುವಕರ ದನಿ ಮುಟ್ಟಬೇಕು ಎಂದರು.

ಹರ್ಷ ಹತ್ಯೆಗೈದವರನ್ನು ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಈ ಸಂದರ್ಭದಲ್ಲಿ ಒತ್ತಾಯಿಸುತ್ತ, ಶಿವಮೊಗ್ಗದಲ್ಲಿ ಹಿಂದೂ ಕಾರ್ಯಕರ್ತ ಹರ್ಷನ ಪ್ರತಿಮೆ ಸ್ಥಾಪನೆಯಾಗಬೇಕು ಎಂದು ಸ್ವಾಮೀಜಿ ಆಗ್ರಹಿಸಿದರು.


ವರದಿ: ನಂದಕುಮಾರ ಕರಂಜೆ
ಟೈಮ್ಸ್ ಆಫ್ ಕರ್ನಾಟಕ, ಬೀದರ

RELATED ARTICLES

Most Popular

error: Content is protected !!
Join WhatsApp Group