ಮೂರು ಕವನ ಸಂಕಲನಗಳ ಬಿಡುಗಡೆ

Must Read

      ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಭವನದಲ್ಲಿ ಶ್ರೀಮತಿ ಸುಲೋಚನಾ ಮಾಲಿಪಾಟೀಲರ ಚಿಗುರಿದ ಹೂಬಳ್ಳಿ, ಅಂತರಂಗದ ನಿನಾದ ಹಾಗೂ ಡಾ.‌ಸುಧಾ ಚಂದ್ರಶೇ ಖರ ಹುಲಗೂರ ಅವರ ಅಂತರಂಗದ ಅಲೆಗಳು ಕವನ ಸಂಕಲನಗಳನ್ನು ಪ್ರೊ. ಮಾಲತಿ ಪಟ್ಟಣಶೆಟ್ಟಿ ಬಿಡುಗಡೆ ಮಾಡಿದರು .

ಕವಯಿತ್ರಿಯರು ಸಮಾಜಮುಖಿಯಾದ ಕವನಗಳನ್ನು ಬರೆಯುವಾಗ ಮೌಲ್ಯಾಧಾರಿತ ಸಂದೇಶ ಇರಬೇಕು. ಭಾಷೆ , ಅಭಿವ್ಯಕ್ತಿ , ಭಾವನೆಗಳು, ವಿಷಯಗಳು ಓದುಗರ ಸಹೃದಯರನ್ನು ಆಕರ್ಷಿಸುವಂತಿರಬೇಕೆಂದು ಕಿವಿಮಾತು ಹೇಳಿದರು.

ಸಾಹಿತ್ಯ ಪರಿಷತ್ತು ಉದಯೋನ್ಮುಖ ಕವಿಗಳ ಕೃತಿಗಳನ್ನು ಬಿಡುಗಡೆ ಮಾಡಿ ಪ್ರೋತ್ಸಾಹಿಸುತ್ತಾ ಬಂದಿರುವುದನ್ನು ಪ್ರೊ. ಮಾಲತಿ ಪಟ್ಟಣಶೆಟ್ಟಿ ಅವರು ಪ್ರಶಂಸಿಸಿದರು. ಬಿಡುಗಡೆಗೊಂಡ ಕವನ ಸಂಕಲನಗಳ ಕುರಿತು ಡಾ. ಎಮ್ ವೈ ಸಾವಂತ್, ಶ್ರೀಮತಿ ಲೀಲಾ ಕಲಕೋಟಿ ಹಾಗೂ ಶ್ರೀಮತಿ ಬಸಂತಿ ಇಂಗಳಳ್ಳಿ ಅವರು ಮಾತನಾಡಿದರು.‌

ಅಧ್ಯಕ್ಷತೆ ವಹಿಸಿದ್ದ ಡಾ. ಎಸ್ ಆರ್ ಗುಂಜಾಳ ಅವರು ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯ ರಚನೆಯಲ್ಲಿ ತೊಡಗಬೇಕು ಎಂದು ತಿಳಿಸಿದರು.

ಡಾ . ಲಿಂಗರಾಜ ಅಂಗಡಿ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.‌ಶ್ರೀಮತಿ ಸುನೀತಾ ಅರಬಳ್ಳಿ ಹಾಗೂ ಶ್ರೀಮತಿ ‌ಲಲಿತಾ ಪಾಟೀಲ ಮತ್ತು ಮಧು ಗುಂಜಾಳ ಅತಿಗಳ ಪರಿಚಯ ಮಾಡಿದರು. ಕು ತೇಜಸ್ವಿನಿ ಹಾಗೂ ಸಂಜನಾ ಪ್ರಾರ್ಥಿಸಿದರು.ವೇದಿಕೆ ಮೇಲೆ ಶ್ರೀಮತಿ ಸುಲೋಚನಾ ಅಪ್ಪಾಸಾಹೇಬ ಮಾಲಿಪಾಟೀಲ ದಂಪತಿಗಳು ಹಾಗೂ ಡಾ. ಸುಧಾ ಚಂದ್ರಶೇಖರ ಹುಲಗೂರ ದಂಪತಿಗಳು ಉಪಸ್ಥಿತರಿದ್ದರು.‌ ಶ್ರೀಮತಿ ಮೇಘಾ ಹುಕ್ಕೇರಿ ಕಾರ್ಯಕ್ರಮ ನಿರೂಪಿಸಿದರು.‌

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group