- Advertisement -
ಬೆಳಗಾವಿ ಜಿಲ್ಲೆಯ, ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಹಿರೇಬಾಗೇವಾಡಿ ಗ್ರಾಮದ ಪ್ರತಿಷ್ಠಿತ ಮನೆತನದ ಸಾಮಾಜಿಕ ಕಾರ್ಯಕರ್ತ, ಪ್ರಗತಿಪರ ಕೃಷಿಕರಾದ ಬಸವರಾಜ ಶಂಕರೆಪ್ಪ ಕಡೇಮನಿ ಅವರಿಗೆ ಹಿರೇಬಾಗೇವಾಡಿ ಸಮುದಾಯ ಆರೋಗ್ಯ ಕೇಂದ್ರದ ಹಿರಿಯ ತಜ್ಞ ವೈದ್ಯಾಧಿಕಾರಿ ಡಾ. ರಾಜಶೇಖರ.ಬಿ. ಯರಜರ್ವಿ, ಬೆಂಗಳೂರು ಬಸವ ಸಮಿತಿ ಕಾರ್ಯಕಾರಿ ಸಮಿತಿ ಸದಸ್ಯ ಮೋಹನ ಬಸನಗೌಡ ಪಾಟೀಲ ಅವರು ವಚನ ಸಂಪುಟ, ನೆನಪಿರಲಿ ಮತ್ತು ಪ್ರಪಂಚದ ಬೆಳಕು ಕವನ ಸಂಕಲನಗಳನ್ನು ನೀಡಿ ಗೌರವಿಸಿದರು.
ಕರ್ನಾಟಕ ರಾಜ್ಯ ಸರಕಾರಿ ನೌಕರ ಸಂಘದ ಬೆಳಗಾವಿ ಜಿಲ್ಲಾ ಘಟಕದ ಕ್ರೀಡಾ ಕಾರ್ಯದರ್ಶಿಗಳಾದ ಕಿರಣ ಸಾವಂತನವರ, ಕನ್ನಡ ಸಾಹಿತ್ಯ ಪರಿಷತ್ತಿನ ಬೆಳಗಾವಿ ಜಿಲ್ಲಾ ಘಟಕದ ಮಾಧ್ಯಮ ಸಹ ಪ್ರತಿನಿಧಿಗಳಾದ ಆಕಾಶ ಅರವಿಂದ ಥಬಾಜ, ಕನ್ನಡ ಸಾಹಿತ್ಯ ಪರಿಷತ್ತಿನ ಬೈಲಹೊಂಗಲ ತಾಲ್ಲೂಕು ಘಟಕದ ನೂತನ ಅಧ್ಯಕ್ಷ ಎನ್.ಆರ್.ಠಕ್ಕಾಯಿ, ವೈದ್ಯರಾದ ಡಾ. ಎಸ್.ಪಿ. ನಾಗರಾಜ ಉಪಸ್ಥಿತರಿದ್ದರು.