ಅರಣ್ಯ ಸಚಿವರ ತವರಿನಲ್ಲಿ ಮರಗಳ ಮಾರಣಹೋಮ

Must Read

ಬೀದರ – ರಾಜ್ಯದ ಅರಣ್ಯ ಸಚಿವರು ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಮರಗಳನ್ನು ಬೆಳೆಸಿ ಪರಿಸರ ಉಳಿಸಿ ಎಂದು ಕರೆಕೊಡುತ್ತಾರೆ ಆದರೆ ಅವರದೇ ಉಸ್ತುವಾರಿಯ ಬೀದರ ಜಿಲ್ಲೆಯಲ್ಲಿ ದಾರಿ ಪಕ್ಕದ ಮರಗಳ ಮಾರಣಹೋಮ ನಡೆದಿದ್ದು ಈ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತಾರೆ ನೋಡಬೇಕು.

ಜಿಲ್ಲೆಯ ಹುಮನಾಬಾದ ಪಟ್ಟಣದ ಚನ್ನಕೇರಾ ಕ್ರಾಸ್ ಶ್ರೀ ವೆಂಕಟೇಶ್ವರ ಗೋಲ್ಡನ್ ಸಿಟಿ ಡೆವೆಲಪರ್ ಹೈದರಾಬಾದ್ ಕಂಪನಿಗೆ ದಾರಿ ಮಾಡಿಕೊಡಲು ಸ್ವತಃ ಅರಣ್ಯ ಅಧಿಕಾರಿಗಳೇ ಮರಗಳನ್ನು ಕಡಿಯಲು ಮುಂದಾಗಿದ್ದು ಸಾರ್ವಜನಿಕರು ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ.

ಒಂಬತ್ತು ನೀಲಗಿರಿ ಹಾಗೂ ಎರಡು ಬೇವಿನ ಮರಗಳನ್ನು ಕತ್ತರಿಸಿ ಹಾಕಲಾಗಿದ್ದು ಅರಣ್ಯ ಸಚಿವರ ಪರಿಸರ ಕಾಳಜಿಯನ್ನು ವ್ಯಂಗ್ಯ ಮಾಡುವಂತಿದೆ.
ಸಚಿವರ ತವರು ಜಿಲ್ಲೆಯಲ್ಲಿಯೇ ನಡೆದಿರುವ ಮರಗಳ ಮಾರಣಹೋಮದ ಪ್ರಕರಣದ ಬಗ್ಗೆ ಸರ್ಕಾರ ಹಾಗು ಸಚಿವರು ಯಾವ ಕ್ರಮ ಕೈಗೊಳ್ಳುತ್ತಾರೋ ಕಾದು ನೋಡಬೇಕು.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group