ಅರಣ್ಯ ಸಚಿವರ ತವರಿನಲ್ಲಿ ಮರಗಳ ಮಾರಣಹೋಮ

Must Read

ಬೀದರ – ರಾಜ್ಯದ ಅರಣ್ಯ ಸಚಿವರು ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಮರಗಳನ್ನು ಬೆಳೆಸಿ ಪರಿಸರ ಉಳಿಸಿ ಎಂದು ಕರೆಕೊಡುತ್ತಾರೆ ಆದರೆ ಅವರದೇ ಉಸ್ತುವಾರಿಯ ಬೀದರ ಜಿಲ್ಲೆಯಲ್ಲಿ ದಾರಿ ಪಕ್ಕದ ಮರಗಳ ಮಾರಣಹೋಮ ನಡೆದಿದ್ದು ಈ ಬಗ್ಗೆ ಯಾವ ಕ್ರಮ ಕೈಗೊಳ್ಳುತ್ತಾರೆ ನೋಡಬೇಕು.

ಜಿಲ್ಲೆಯ ಹುಮನಾಬಾದ ಪಟ್ಟಣದ ಚನ್ನಕೇರಾ ಕ್ರಾಸ್ ಶ್ರೀ ವೆಂಕಟೇಶ್ವರ ಗೋಲ್ಡನ್ ಸಿಟಿ ಡೆವೆಲಪರ್ ಹೈದರಾಬಾದ್ ಕಂಪನಿಗೆ ದಾರಿ ಮಾಡಿಕೊಡಲು ಸ್ವತಃ ಅರಣ್ಯ ಅಧಿಕಾರಿಗಳೇ ಮರಗಳನ್ನು ಕಡಿಯಲು ಮುಂದಾಗಿದ್ದು ಸಾರ್ವಜನಿಕರು ವ್ಯಾಪಕ ಆಕ್ರೋಶ ಹೊರಹಾಕಿದ್ದಾರೆ.

ಒಂಬತ್ತು ನೀಲಗಿರಿ ಹಾಗೂ ಎರಡು ಬೇವಿನ ಮರಗಳನ್ನು ಕತ್ತರಿಸಿ ಹಾಕಲಾಗಿದ್ದು ಅರಣ್ಯ ಸಚಿವರ ಪರಿಸರ ಕಾಳಜಿಯನ್ನು ವ್ಯಂಗ್ಯ ಮಾಡುವಂತಿದೆ.
ಸಚಿವರ ತವರು ಜಿಲ್ಲೆಯಲ್ಲಿಯೇ ನಡೆದಿರುವ ಮರಗಳ ಮಾರಣಹೋಮದ ಪ್ರಕರಣದ ಬಗ್ಗೆ ಸರ್ಕಾರ ಹಾಗು ಸಚಿವರು ಯಾವ ಕ್ರಮ ಕೈಗೊಳ್ಳುತ್ತಾರೋ ಕಾದು ನೋಡಬೇಕು.

ವರದಿ : ನಂದಕುಮಾರ ಕರಂಜೆ, ಬೀದರ

Latest News

ಕವನ : ಶ್ರದ್ಧೆ

ಶ್ರದ್ಧೆಶ್ರದ್ಧೆ ಎಂದರೆ ಕೇವಲ ನಂಬಿಕೆ ಅಲ್ಲ, ಸಾಧನೆಯ ಕೀಲಿ ಕೈ ಆಗಿದೆಯಲ್ಲ ಹೃದಯದಿಂದ ಹೊಮ್ಮುವ ಶಕ್ತಿ ಎಲ್ಲ ಕಣ್ಣಿಗೆ ಕಾಣದ ಅದ್ಭುತ ಅನುಭವದ ಬೆಲ್ಲ ಹೆಜ್ಜೆಗೆ ದಿಕ್ಕು ತೋರುವ ಬೆಳಕ ಸಾಧನೆಯ ಹಾದಿಯ...

More Articles Like This

error: Content is protected !!
Join WhatsApp Group