ಡಾ. ಭೀಮಣ್ಣ ಖಂಡ್ರೆಯವರಿಗೆ ಶೃದ್ಧಾಂಜಲಿ

Must Read
   ಸಿಂದಗಿ- ಡಾ.ಭೀಮಣ್ಣ ಖಂಡ್ರೆ ಅವರನ್ನು ಕಳೆದುಕೊಂಡ ಈ ನಾಡು ಬಡವಾಗಿದೆ ಅವರ ಬದುಕು ಅತ್ಯಂತ ದಕ್ಷತೆಯಿಂದ ಕೂಡಿತ್ತು ಅವರೊಬ್ಬರು ಅಜಾತಶತ್ರುವಾಗಿದ್ದರು ಎಂದು ನಗರದ ಎಚ್.ಜಿ.ಕಾಲೇಜಿನ ಪ್ರಾಚಾರ್ಯ ಎ.ಆರ್.ಹೆಗ್ಗನದೊಡ್ಡಿ ಹೇಳಿದರು.
   ಅವರು ಪಟ್ಟಣದ ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿ ಶಿಕ್ಷಣ ಸಂಸ್ಥೆ ಶನಿವಾರ ಬೀದರನ ಲೋಕನಾಯಕ ಮಾಜಿ ಸಚಿವ ಅಖಿಲ ಭಾರತ ವೀರಶೈವ ಮಹಾಸಭಾದ ಮಾಜಿ ಅಧ್ಯಕ್ಷ ಡಾ.ಭೀಮಣ್ಣ ಖಂಡ್ರೆ ಅವರ ನಿಧನದ ಹಿನ್ನೆಲೆಯಲ್ಲಿ ಹಮ್ಮಿಕೊಂಡ ಶ್ರದ್ದಾಂಜಲಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
   ಅವರು ಕೇವಲ ರಾಜಕಾರಣ ಮಾತ್ರ ಮಾಡಿದವರಲ್ಲ ಜೊತೆಗೆ ಸಾಮಾಜಿಕ ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಅಪಾರ ಕೊಡುಗೆ ನೀಡಿದವರು. ಬಸವಣ್ಣನವರ ಅಪ್ಪಟ ಅನುಯಾಯಿಯಾಗಿ ವಚನ ಸಾಹಿತ್ಯವನ್ನು ಇಡಿ ರಾಜ್ಯಕ್ಕೆ ಪಸರಿಸಲು ಶ್ರಮಿಸಿದ್ದಾರೆ. ಬೀದರ ಜಿಲ್ಲೆಯನ್ನು ಕರ್ನಾಟಕದಲ್ಲಿಯೆ ಉಳಿಸಿಕೊಳ್ಳಲು ಟೊಂಕಕಟ್ಟಿ ನಿಂತು ಆ ಪ್ರಯತ್ನದಲ್ಲಿ ಸಫಲರಾದವರು ಅವರ ಬದುಕಿನ ಹೊರಾಟ ಈ ನೆಲದಲ್ಲಿ ಚಿರಸ್ಥಾಯಿಯಾಗಿವೆ ಎಂದರು.
    ಈ ವೇಳೆ ನಿವೃತ್ತ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ, ಉಪನ್ಯಾಸಕರಾದ ಎಸ್.ಎ.ಪಾಟೀಲ, ಎಮ್.ಎನ್.ಅಜ್ಜಪ್ಪ, ಸಿದ್ದಲಿಂಗ ಕಿಣಗಿ, ಸತೀಶ ಬಸರಕೋಡ, ಎಸ್.ಎ.ಜಾಗಿರದಾರ, ಪ್ರದೀಪ ಕತ್ತಿ,  ಎನ್.ಆರ್.ಕುಲಕರ್ಣಿ, ಎಸ್.ಆರ್.ಬಿರಾದಾರ, ಎಸ್.ಬಿ.ಅಂಕಲಗಿ, ಎಸ್.ಎಮ್.ಹಿರೇಮಠ, ಜಿ.ಆಯ್.ಲೋಣಿ ಸೇರಿದಂತೆ ಇತರರು ಇದ್ದರು.

LEAVE A REPLY

Please enter your comment!
Please enter your name here

Latest News

ಅಕ್ರಮ ಸಾರಾಯಿ ನಿಷೇಧಿಸಲು ಬಾಲಚಂದ್ರ ಜಾರಕಿಹೊಳಿ ಸೂಚನೆ

ಮೂಡಲಗಿ-ಅರಭಾವಿ ಮತಕ್ಷೇತ್ರದಲ್ಲಿ ನಡೆಯುತ್ತಿರುವ ಅಕ್ರಮ ಸಾರಾಯಿಯನ್ನು ಕೂಡಲೇ ನಿಷೇಧಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಕೊಳ್ಳುವಂತೆ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಪೊಲೀಸ್ ಅಧಿಕಾರಿಗಳಿಗೆ...

More Articles Like This

error: Content is protected !!
Join WhatsApp Group