- Advertisement -
ಮೈಸೂರು ಜಿಲ್ಲೆ ಸಾಲಿಗ್ರಾಮದ ಸಾ.ರಾ.ವಿದ್ಯಾ ಸಂಸ್ಥೆಯಲ್ಲಿ ಅಖಿಲ ಭಾರತೀಯ ಕನ್ನಡ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪರಿಷತ್ತು ಹಾಗೂ ಡಾ.ರಾಜಕುಮಾರ್ ವೇದಿಕೆಗಳ ವತಿಯಿಂದ ಏರ್ಪಡಿಸಲಾಗಿದ್ದ ವಿದ್ಯಾರ್ಥಿ ಜಾಗೃತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಹಿರಿಯ ಸಾಹಿತಿ, ಪತ್ರಕರ್ತ ಹಾಗೂ ಮೈಸೂರು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ಡಾ.ಭೇರ್ಯ ರಾಮಕುಮಾರ್ ಅವರನ್ನು ಕನ್ನಡ ನಾಡು-ನುಡಿ ಸೇವೆಗಾಗಿ ಸನ್ಮಾನಿಸಲಾಯಿತು.
ಸಾ.ರಾ. ವಿದ್ಯಾಸಂಸ್ಥೆಯ ಕಾರ್ಯದರ್ಶಿಗಳಾದ ಸಾ.ರಾ. ರವೀಶ್, ಕನ್ನಡ ಪರ ಚಿಂತಕ ಡಾ.ಎಂ.ಆರ್.ವಿನಯ್, ಚಿಂತಕ ಗುಣಚಂದ್ರಕುಮಾರ್ ಮೊದಲಾದವರು ಚಿತ್ರದಲ್ಲಿದ್ದಾರೆ.