ಬೀದರ್‌ ನಲ್ಲಿ ಭೀಕರ ಅಪಘಾತ ಇಬ್ಬರು ಸಾವು

Must Read

ಬೀದರ – ಕುಡಿದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ಬೀದರನಲ್ಲಿ ನಡೆದಿದೆ.

ತಡರಾತ್ರಿ ನಡೆದ ಭಾರೀ ಅಪಘಾತಕ್ಕೆ ಸ್ಥಳದಲ್ಲೆ ಓರ್ವ ಸಾವನ್ನಪ್ಪಿದ್ದು ಮತ್ತೊಬ್ಬ ಬ್ರೀಮ್ಸ್ ಆಸ್ಪತ್ರೆಯಲ್ಲಿ‌ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಬೀದರ್ ಹೊರ ವಲಯದ ದೇವ ದೇವ ಉದ್ಯಾನವನದ ಬಳಿ ಈ ಘಟನೆ ನಡೆದಿದೆ.

ವಿದ್ಯಾಸಾಗರ ಹಿರೇಮಠ (28) ಹಾಗೂ ಶಾಮ್ ರಾವ್ (30) ಎಂಬ ಈ ಯುವಕರು ರಾತ್ರಿ ಪಾರ್ಟಿ ಮಾಡಿ ತೆಲಂಗಾಣದಿಂದ ಬೀದರ್ ಗೆ ಬರುತ್ತಿದ್ದ ವೇಳೆ ಈ ಭೀಕರ ಅಪಘಾತ ಸಂಭವಿಸಿದ್ದು ಈ ಕುರಿತು ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ವರದಿ: ನಂದಕುಮಾರ ಕರಂಜೆ, ಬೀದರ

Latest News

ಕವನ : ಅನುಬಂಧ

ಅನುಬಂಧಕಾಣದ ದಾರಿಯಲ್ಲಿ ಬೆಸೆದ ನಂಟು, ಹೆಸರಿಲ್ಲದಿದ್ದರೂ ಹೃದಯಕ್ಕೆ ಪರಿಚಿತವಾದ ಬಂಧ… ಕಾಲದ ಹೊಳೆ ಹರಿದರೂ ಕಳೆಯದ ಗುರುತು, ಗಂಟು ಅದು ಅನುಬಂಧ. ಮೌನದಲ್ಲೂ ಮಾತಾಡುವ ಸಂಬಂಧ, ಬಂಧ.. ಕಣ್ಣಂಚಿನ ನೀರನ್ನೂ ಓದುತ್ತದೆ ಒರೆಸುತ್ತದೆ. ಹೃದಯ ಮುರಿದು ನೊಂದ ಕ್ಷಣದಲ್ಲಿ ಅದೃಶ್ಯವಾಗಿ ಕೈ ಹಿಡಿದುಕೊಳ್ಳುತ್ತದೆ. ಮಣ್ಣಿನ ವಾಸನೆಯಂತೆ ಸಹಜ, ಬೆಳಗಿನ ಬೆಳಕಿನಂತೆ ಮೃದುವು. ನಗುವಿನಲ್ಲೂ,...

More Articles Like This

error: Content is protected !!
Join WhatsApp Group