ಎರಡು ಕವಿತೆಗಳು

Must Read

ಬಸವಣ್ಣ ನೀ ಬಿಟ್ಟ…
_____________________

ಬಸವಣ್ಣ ನೀ ಕಳಚಿಟ್ಟ
ಕಿರೀಟವನು ಇವರು
ಧರಿಸಿ ಕುಳಿತು ಕುಪ್ಪಳ್ಳಿಸುತ್ತಿದ್ದಾರೆ
ನೀ ತೊರೆದ ಅರಮನೆಯ
ಮಠವ ಮಾಡಿ
ಸಕಲ ಭೋಗಾದಿಯಲಿ
ಮೆರೆಯುತಿಹರು.
ಬಸವಣ್ಣ ನೀ ಬಿಟ್ಟ
ಸಿಂಹಾಸನವನ್ನು
ಹತ್ತಿ ಇಳಿಯದೆ
ಕುಳಿತಿಹರು
ಅಕ್ಕ ಮಾತೆ ಸ್ವಾಮಿ ಶರಣರು
ಕಲ್ಲು ಸಕ್ಕರೆ ಕೊಟ್ಟು.
ಶೋಷಣೆ ವಸೂಲಿ ಕಾಯಕವಾಗಿದೆ
ಜಂಗಮ ಜಾತಿಯಾಗಿದೆ
ಜಾತ್ರೆ ತೇರು ರಥ ಉತ್ಸವ
ಕಾವಿ ಲಾಂಛನಧಾರಿಗಳ ಅಬ್ಬರ
ಇಲ್ಲ ಈಗ ಶಾಂತಿ ಸಮತೆ
ಬಸವಣ್ಣ ನಿನ್ನ ಜಗವೇ
ಹೊತ್ತು ನಡೆದಿದೆ.
ನಿನ್ನನರಿಯದ ದುರುಳರ
ಸಂಗವ ಮಾಡಿ
ನಾನು ಕೆಟ್ಟೆನು
ಬಸವ ಪ್ರಿಯ ಶಶಿಕಾಂತ

————————————-
ಗೆದ್ದು ನಿಲ್ಲುವ ರೀತಿಯು
___________________

ಮರೆತು ನಿನ್ನಯ
ನಿನ್ನೆಯ ನೋವು
ಬರುವ ನಾಳೆಯ
ನಗೆ ಸಿಹಿ ಘಳಿಗೆ
ಗಟ್ಟಿ ಗೊಳ್ಳು ಇಂದು
ನಿನ್ನ ಬಾಳಿಗೆ

ಏರು ಪೇರು ದಿಬ್ಬ ದಿಣ್ಣೆ
ಕಲ್ಲು ಮುಳ್ಳಿನ
ನಿನ್ನ ಪಯಣವು
ನಂಜು ನುಂಗಿ
ನಗೆಯ ಬೀರು
ಸ್ನೇಹ ಒಲವು ತಾಯಿ ಬೇರು

ಕಳೆದು ಕತ್ತಲೆ
ಬೆಳೆಗು ಬೆಳೆಯಲಿ
ಶಾಂತಿ ಸಮರಸ ಪ್ರೀತಿಯು
ಎದ್ದು ನಿಂತು ಹೆಜ್ಜೆ ಹಾಕು
ದಿಟ್ಟ ದೂರದ ದಾರಿಯು
ಗೆದ್ದು ನಿಲ್ಲುವ ರೀತಿಯು

ಡಾ ಶಶಿಕಾಂತ ಪಟ್ಟಣ, ರಾಮದುರ್ಗ

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group