spot_img
spot_img

ಕನ್ನಡ ಸಾಹಿತ್ಯ ಅಮೂಲ್ಯ ರತ್ನ ಭಂಡಾರ ; ವಚನಗಳು

Must Read

spot_img
- Advertisement -

ಸಿಂದಗಿ: ಕನ್ನಡ ಸಾಹಿತ್ಯ ಪರಂಪರೆಯಲ್ಲಿ ತುಂಬಾ ವಿಶೇಷ ಸ್ಥಾನ ವಚನ ಸಾಹಿತ್ಯಕ್ಕೆ ಇದೆ.ಹನ್ನೆರಡನೇಯ ಶತಮಾನದ ವಚನ ಸಾಹಿತ್ಯ ಶರಣರು ಕನ್ನಡಕ್ಕೆ ಕೊಟ್ಟ ಲೋಕ ಕಾಣಿಕೆ ವಚನಗಳು ಕನ್ನಡ ಸಾಹಿತ್ಯ ಭಂಡಾರದ ಅಮೂಲ್ಯ ರತ್ನಗಳಾಗಿ ವಿಶ್ವ ಸಾಹಿತ್ಯ ದೃಷ್ಟಿಯಿಂದ ಕನ್ನಡ ಸಾಹಿತ್ಯದ ಬೆಲೆಯನ್ನು ಹೆಚ್ಚಿಸಿವೆ ಎಂದು ಜಾನಪದ ಅಕಾಡೆಮಿ ಸದಸ್ಯ ಡಾ. ಎಂ.ಎಂ.ಪಡಶೆಟ್ಟಿ ಹೇಳಿದರು

ಪಟ್ಟಣದ ತಾಲೂಕು ಶರಣ ಸಾಹಿತ್ಯ ಪರಿಷತ್ತು ಸಿಂದಗಿ ಹಾಗೂ ಆರ್.ಡಿ.ಪಾಟೀಲ ಪ.ಪೂ.ಕಾಲೇಜಿನ ಸಹಯೋಗದಲ್ಲಿ ಹಮ್ಮಿಕೊಂಡ ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನ ಹಾಗೂ ಸಂಸ್ಥಾಪಕರಾದ ಸುತ್ತೂರು ಜಗದ್ಗುರು ಪೂಜ್ಯಶ್ರೀ ಡಾ. ಶಿವರಾತ್ರಿ ರಾಜೇಂದ್ರ ಮಹಾಸ್ವಾಮಿಗಳ ಜನ್ಮದಿನದ ಅಂಗವಾಗಿ ಆಯೋಜಿಸಿರುವ ವಚನ ದಿನ ಸಮಾರಂಭದಲ್ಲಿ ಉಪನ್ಯಾಸ ನೀಡಿ ಅವರು ಮಾತನಾಡಿದರು.

ವಚನ ಸಾಹಿತ್ಯದ ಶ್ರೀಮಂತಿಕೆಗೆ ನೂರಾರು ಜನ ಶರಣರು ಶ್ರಮಿಸಿದ್ದಾರೆ. ವಿಶ್ವ ಸಾಹಿತ್ಯದಲ್ಲಿ ಎಷ್ಟೇ ಅದ್ಭುತ ಧಾರ್ಮಿಕ, ಸಾಮಾಜಿಕ ಪರಿವರ್ತನೆಯ ಸಾಹಿತ್ಯ ಮೂಡಿಬಂದಿದ್ದರೂ ವಚನ ಸಾಹಿತ್ಯವನ್ನು ಕಡೆಗಣಿಸಲು ಸಾಧ್ಯವಿಲ್ಲ ಕಾರಣ ಅವು ಎಲ್ಲ ಕಾಲಕ್ಕೂ ಎಲ್ಲ ಜನರಿಗೂ ಸಲ್ಲುವಂತಹ, ಹೃದಯದಿಂದ ಮೂಡಿಬಂದಿರುವ ಅಮೃತ ಬಿಂದುಗಳು ಎಂದರು.

- Advertisement -

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಭೀಮನಗೌಡ ಸಿಂಗನಳ್ಳಿ ಮಾತನಾಡಿ, ಭಾರತೀಯ ಸಾಹಿತ್ಯ ಹಾಗೂ ವಿಶ್ವ ಸಾಹಿತ್ಯಕ್ಕೆ ಕನ್ನಡ ಭಾಷೆಯ ಅಮೂಲ್ಯ ಕೊಡುಗೆ ವಚನ ಸಾಹಿತ್ಯ ಕನ್ನಡ ಸಾಹಿತ್ಯಕ್ಕೆ ಕೊಡಮಾಡಿದ ಅನರ್ಘ್ಯ ಸಾಹಿತ್ಯರತ್ನ ಇದಾಗಿದೆ ಎಂದರು.

ಜಾನಪದ ದತ್ತಿ ಪ್ರಶಸ್ತಿಗೆ ಭಾಜನರಾದ ಬೋರಗಿಯ ತತ್ವಪದ ಹಾಗೂ ಜನಪದ ಹಾಡುಗಾರ್ತಿ ಇಮಾಂಬಿ ದೊಡಮನಿ, ಡಾಕ್ಟರೇಟ್ ಪದವಿ ಪುರಸ್ಕೃತ ಜಿಪಿಪಿ ಕಾಲೇಜಿನ ದೈಹಿಕ ನಿರ್ದೇಶಕ ಡಾ. ರವಿ ಗೋಲಾ ಹಾಗೂ ಜಾನಪದ ಅಕಾಡೆಮಿ ಸದಸ್ಯ ಡಾ. ಎಂ.ಎಂ.ಪಡಶೆಟ್ಟಿ ಅವರಿಗೆ ಸನ್ಮಾನಿಸಿ ಗೌರವಿಸಿದರು.

ಇದೇ ಸಂದರ್ಭದಲ್ಲಿ ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಶರಣಬಸವ ಜೋಗೂರ ಮಾತನಾಡಿದರು. ಕದಳಿ ವೇದಿಕೆ ಅಧ್ಯಕ್ಷೆ ಸುಜಾತಾ ಕಿಣಗಿ, ಶಿವಪ್ಪ ಗೌಸಾನಿ, ಬಿ.ಎಸ್.ಹನುಮಶೆಟ್ಟಿ, ಚನ್ನಪ್ಪ ಕತ್ತಿ, ಮಹಾನಂದಾ ಬಮ್ಮಣ್ಣಿ, ಮಹಾದೇವಪ್ಪ ಸಿಂದಗಿ, ಶಿವಶರಣ ಬೂದಿಹಾಳ, ಮಧು ಬಮ್ಮಣ್ಣಿ, ಜಗದೇವಿ ಅಂಬಲಗಿ, ಎಸ್.ಜಿ.ಮಾರ್ಸನಳ್ಳಿ, ಎನ್.ಬಿ.ಪೂಜಾರಿ, ಪಿ.ವ್ಹಿ.ಮಹಲಿನಮಠ, ಎಸ್.ಎಚ್.ಜಾಧವ, ಬಿ.ಬಿ.ಜಮಾದಾರ, ದುಂಡಯ್ಯ ಮಠಪತಿ, ರಾಹುಲ ನಾರಾಯಣಕರ್, ಸರಸ್ವತಿ ಸಿಂದಗಿ, ಸಂಗಮೇಶ ಚಾವರ, ಎನ್.ಎಂ.ಶೆಳ್ಳಗಿ, ನೀಲಕಂಠ ಮೇತ್ರಿ, ಆರ್.ಎಂ.ಕೊಳ್ಳೂರೆ, ಉದಯ ಶಿವಸಿಂಪಿಗೇರ್, ಎಸ್.ಎಸ್.ತಾಳಿಕೋಟಿ, ಸುನೀಲ ಪಾಟೀಲ ಸೇರಿದಂತೆ ವಿದ್ಯಾರ್ಥಿಗಳು ಇನ್ನಿತರರು ಇದ್ದರು.

- Advertisement -
- Advertisement -

Latest News

ಜಾನುವಾರುಗಳಿಗೆ ಉಚಿತ ತಪಾಸಣಾ ಶಿಬಿರ

ಶ್ರೀಮತಿ ಸೋಮವ ಚನ್ನಬಸಪ್ಪ ಅಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆ ಕೆ ಕೊಪ್ಪ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ವತಿಯಿಂದ ಜಾನುವಾರುಗಳಿಗೆ...
- Advertisement -

More Articles Like This

- Advertisement -
close
error: Content is protected !!
Join WhatsApp Group