Homeಸುದ್ದಿಗಳುಜೀವನದ ಮೌಲ್ಯ ತಿಳಿಸಿದ ವಾಲ್ಮೀಕಿ

ಜೀವನದ ಮೌಲ್ಯ ತಿಳಿಸಿದ ವಾಲ್ಮೀಕಿ

ಮೂಡಲಗಿ: ರಾಮಾಯಣ ಎಂಬ ಮಹಾ ಕಾವ್ಯವನ್ನು ರಚಿಸುವ ಮೂಲಕ ಸಾರ್ವಕಾಲಿಕ ಆದರ್ಶಗಳನ್ನು, ಜೀವನದ ಮೌಲ್ಯಗಳನ್ನು ತಿಳಿಸಿಕೊಟ್ಟ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಆ ಮಹಾನ ಚೇತನಕ್ಕೆ ಶತ ಶತ ಕೋಟಿ ಪ್ರಣಾಮಗಳನ್ನು ಸಲ್ಲಿಸುವುದಾಗಿ ಸಂಸದ ಈರಣ್ಣ ಕಡಾಡಿ ಹೇಳಿದರು

ಅ. 20 ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಕಲ್ಲೋಳಿಯ ರಾಜ್ಯಸಭಾ ಸಂಸದರ ಜನಸಂಪರ್ಕ ಕಾರ್ಯಾಲಯದಲ್ಲಿ ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

ಈ ಕಾರ್ಯಕ್ರಮದಲ್ಲಿ ನ್ಯಾಯವಾದಿ ಮಲ್ಲಪ್ಪ ಕಡಾಡಿ, ನಿರ್ದೇಶಕರಾದ ಶ್ರೀಶೈಲ ತುಪ್ಪದ, ಪರಪ್ಪ ಮಳವಾಡ, ಸಿದ್ದಪ್ಪ ಹೆಬ್ಬಾಳ, ಸೋಮಲಿಂಗ ಹಡಿಗನಾಳ, ಪ್ರಧಾನ ವ್ಯವಸ್ಥಾಪಕ ಹಣಮಂತ ಕಲಕುಟ್ರಿ, ಮಹಾದೇವ ಮದಭಾಂವಿ, ಈರಣ್ಣ ಮುನ್ನೋಳಿಮಠ, ಅಡಿವೆಪ್ಪ ಕುರಬೇಟ, ಮಹಾಂತೇಶ ಬಿ.ಪಾಟೀಲ, ಶಿವಾನಂದ ಬಡಿಗೇರ, ದೊಡ್ಡಪ್ಪ ಉಜ್ಜಿನಕೊಪ್ಪ, ಶಂಕರ ಖಾನಗೌಡ್ರ, ಸೇರಿದಂತೆ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

RELATED ARTICLES

Most Popular

error: Content is protected !!
Join WhatsApp Group