spot_img
spot_img

ಜ.25ರಂದು ಮೂಡಲಗಿಯಲ್ಲಿ ವೇಮನರ ಜಯಂತ್ಯುತ್ಸವ

Must Read

- Advertisement -

ಮೂಡಲಗಿ: ಮೂಡಲಗಿ ಪಟ್ಟಣದಲ್ಲಿ  ದಾರ್ಶನಿಕ ಕವಿ ಮಹಾಯೋಗಿ ಶ್ರೀ ವೇಮನರ 611ನೇಯ ಮೂಡಲಗಿ ತಾಲೂಕಾ ಮಟ್ಟದ ಜಯಂತ್ಯುತ್ಸವವನ್ನು ಜ.25 ರಂದು ಬಸವ ರಂಗ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮೂಡಲಗಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ವಿಜಯಕುಮಾರ ಸೋನವಾಲ್ಕರ ಅವರು ತಿಳಿಸಿದರು.

ಸೋಮವಾರದಂದು ಪಟ್ಟಣದಲ್ಲಿನ ಪತ್ರಿಕಾ ಕಾರ್ಯಲಯದಲ್ಲಿ ಏರ್ಪಡಿಸಿದ ಸುದ್ದಿಗೋಷ್ಠಿಯಲ್ಲಿ ಕಾರ್ಯಕ್ರಮದ ಕುರಿತು ಮಾತನಾಡಿದ ಅವರು, ಜ.25 ರಂದು ಮುಂಜಾನೆ 10ಕ್ಕೆ ಮೂಡಲಗಿ ಶಿಕ್ಷಣ ಸಂಸ್ಥೆಯ  ಹತ್ತಿರದಿಂದ ಬೃಹತ ಬೈಕ್ ರ್ಯಾಲಿ ಜರುಗಲಿದೆ. ಮಧ್ಯಾಹ್ನ 2 ಗಂಟೆಯಿಂದ ಮೂಡಲಗಿ ಶಿಕ್ಷಣ ಸಂಸ್ಥೆಯ  ಆವರಣದಿಂದ  ಜಯಂತ್ಯುತ್ಸವದ ಅಂಗವಾಗಿ ವೇಮನರ ಭಾವ ಚಿತ್ರದ ಭವ್ಯ ಮೆರವಣಿಗೆಯು ಮಹಿಳೆಯರ ಕುಂಭಮೇಳ ಹಾಗೂ ಸಕಲವಾದ್ಯ ಮೇಳದೊಂದಿಗೆ ಬಸವರಂಗ ಮಂಟಪದವರೆಗೆ ಜರುಗುವುದು.

ಸಂಜೆ 5.ಗಂಟೆಗೆ ಬಸವ ರಂಗ ಮಂಟಪದಲ್ಲಿ ಜರುಗಲಿರುವ ವೇಮನರ ಜಯಂತ್ಯುತ್ಸವ ಸಮಾರಂಭದಲ್ಲಿ ಮಹಿಳೆಯರಿಂದ ತೊಟ್ಟಿಲೋತ್ಸವ, ಸುಮಂಗಲಿಯರ ಉಡಿತುಂಬುವದು  ಮತ್ತು ಅತಿಥಿ ಮಹೋದಯರಿಂದ  ಹಾಗೂ ಶ್ರೀಗಳಿಂದ ಉಪನ್ಯಾಸ ಜರುಗುವುದು.

- Advertisement -

ಸಮಾರಂಭದ ದಿವ್ಯ ಸಾನ್ನಿಧ್ಯವನ್ನು ಪಟ್ಟಣದ ಶಿವಬೋಧರಂಗ ಮಠದ ಪೀಠಾಧಿಪತಿಗಳಾದ ಶ್ರೀ ದತ್ತಾತ್ರೇಯಬೋಧ ಶ್ರೀಗಳು, ಶ್ರೀ ಶ್ರೀಧರಬೋಧ ಶ್ರೀಗಳು, ಹರಿಹರ ತಾಲೂಕಿನ ಎರೆಹೊಸಳ್ಳಿಯ ಶ್ರೀ ವೇಮನ ರಡ್ಡಿ ಗುರುಪೀಠದ ಶ್ರೀ ವೇಮನಾನಂದ ಶ್ರೀಗಳು, ಸುಣಧೋಳಿ ಜಡಿಸಿದ್ಧೇಶ್ವರ ಮಠದ  ಶ್ರೀ ಶಿವಾನಂದ ಶ್ರೀಗಳು, ಮುನ್ಯಾಳ-ರಂಗಾಪೂರದ ಡಾ. ಶಿವಲಿಂಗ ಮುರಘರಾಜೇಂದ್ರ ಶಿವಾಚಾರ್ಯ ಶ್ರೀಗಳು, ತೊಂಡಿಕಟ್ಟಿ ಗಾಳೇಶ್ವರ ಮಠದ ಶ್ರೀ ವೆಂಕಟೇಶ್ವರ ಶ್ರೀಗಳು ಮತ್ತು ಮುನ್ಯಾಳದ ಲಕ್ಷ್ಮಣ ದೇವರು ವಹಿಸುವರು.

ಸಮಾರಂಭದ ಅಧ್ಯಕ್ಷತೆಯನ್ನು ಸಮಾಜದ ಹಿರಿಯರು ಹಾಗೂ ಮೂಡಲಗಿ ಪುರಸಭೆ ಮಾಜಿ ಅಧ್ಯಕ್ಷ ಎಸ್.ಆರ್.ಸೋನವಾಲ್ಕರ ವಹಿಸುವರು. ಮುಖ್ಯ ಅತಿಥಿಗಳಾಗಿ ಕೆ.ಎಮ್.ಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ, ಸಂಸದರಾದ ಮಂಗಳಾ ಅಂಗಡಿ, ಈರಣ್ಣಾ ಕಡಾಡಿ ಮತ್ತು ಅತಿಥಿಗಳಾಗಿ ನರಗುಂದದ ಮಾಜಿ ಸಚಿವ ಬಿ.ಆರ್.ಯಾವಗಲ್ಲ, ನವಲಗುಂದ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ, ಮೂಡಲಗಿ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಹಾಗೂ ಅಥಿತಿ ಉಪನ್ಯಾಸಕರಾಗಿ ಆದ್ಯಾತ್ಮಿಕ ಚಿಂತಕರು ಹಾಗೂ ವಾಣಿಜ್ಯ ತೆರಿಗೆ ನಿವೃತ್ತ ಉಪ ಆಯಕ್ತ ಹುಬ್ಬಳ್ಳಿಯ ಜಿ.ಬಿ.ಗೌಡಪ್ಪಗೋಳ, ರಾಮದುರ್ಗದ ಸರಕಾರಿ ಪ್ರೌಢ ಶಾಲೆಯ ಶಿಕ್ಷಕ ಆನಂದ ಪಾಟೀಲ ಅವರು ಭಾಗವಹಿಸುವರು ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮೂಡಲಗಿ ಶಿಕ್ಷಣ ಸಂಸ್ಥೆಯ ನಿರ್ದೇಶಕರಾದ ಪ್ರದೀಪ ಲಂಕೆಪ್ಪನವರ, ಅನೀಲ ಸತರಡ್ಡಿ ಮತ್ತು ಕುಮಾರ ಗಿರಡ್ಡಿ, ಹನಮಂತ ಸತರಡ್ಡಿ, ವೀರಣ್ಣ ಸೋನವಾಲ್ಕರ, ಚೇತನ ಹೊಸಕೋಟಿ ಮತ್ತಿತರರು ಇದ್ದರು.

- Advertisement -
- Advertisement -

Latest News

ಎಸ್ ಎಸ್. ಎಲ್ ಸಿ ಪರೀಕ್ಷೆಯಲ್ಲಿ ಸಾಧನೆ ಗೈದ ವಿದ್ಯಾರ್ಥಿಗೆ ಸತ್ಕಾರ

ಮುಧೋಳ:  ನಗರ ಶಾಮೇಲ್ಸ್ ಪ್ರೌಢ ಶಾಲೆಯ  ಸಹನಾ ಶ್ರೀಶೈಲ್ ಚಿಕಲಕ್ಕಿ ವಿದ್ಯಾರ್ಥಿ ಕಳೆದ ಮಾರ್ಚ-ಏಪ್ರಿಲ್ ತಿಂಗಳಲ್ಲಿ ಜರುಗಿದ ಎಸ್.ಎಸ್. ಎಲ್. ಸಿ ಪರೀಕ್ಷೆಯ ಮರು ಮೌಲ್ಯ...
- Advertisement -

More Articles Like This

- Advertisement -
close
error: Content is protected !!
Join WhatsApp Group