ಮಾಡಲಗೇರಿ ಕ.ಸಾ.ಪ.ಸದಸ್ಯರಿಂದ ವಿವೇಕಾನಂದಗೌಡ ಪಾಟೀಲರಿಗೆ ಸನ್ಮಾನ

Must Read

ಗದಗ: ಇತ್ತೀಚೆಗೆ ನಡೆದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಗದಗ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾದ ವಿವೇಕಾನಂದಗೌಡ ಪಾಟೀಲ ಅವರನ್ನು ಗದಗ ಲೇಕ್ ವ್ಯೂ ಹೋಟೆಲ್‌ನಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಾಡಲಗೇರಿ ಗ್ರಾಮದ ಕನ್ನಡ ಸಾಹಿತ್ಯ ಪರಿಷತ್ ಅಜೀವ ಸದಸ್ಯರುಗಳಾದ ಹಾಗೂ ಯುವ ಸಾಹಿತಿ ಡಾ.ವ್ಹಿ.ಬಿ. ಸಣ್ಣಸಕ್ಕರಗೌಡರ, ಬಸವರಾಜ ಹಡಪದ, ಬಸವರಾಜ ಪೂಜಾರ, ಯುವ ಧುರೀಣ ಸಿದ್ಧಲಿಂಗಪ್ಪ ನವಲಗುಂದ ಅವರುಗಳು ನೂತನ ಅಧ್ಯಕ್ಷರನ್ನು ಸನ್ಮಾನಿಸಿ, ಸಿಹಿಹಂಚಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಸಾಹಿತಿಗಳಾದ ಡಾ.ಅರ್ಜುನ ಗೊಳಸಂಗಿ, ಡಾ.ಶಿವಪ್ಪ ಕುರಿ, ಹಿರಿಯ ಶಿಕ್ಷಕರಾದ ಪಿ.ಎಚ್.ಕಡಿವಾಲ ಮೊದಲಾದ ಗಣ್ಯರು ಉಪಸ್ಥಿತರಿದ್ದರು.

- Advertisement -
- Advertisement -

Latest News

ಮೂಡಲಗಿಯಲ್ಲಿ ಶಾಸಕರ ನೇತೃತ್ವದಲ್ಲಿ ತಿರಂಗಾ ಯಾತ್ರೆ

ಮೂಡಲಗಿ:- ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಯಶಸ್ವಿಯಾದ ಹಿನ್ನೆಲೆ ಮೇ,೨೦ ರಂದು ಮಂಗಳವಾರ,ಸಂಜೆ ೪ ಗಂಟೆಗೆ ಮೂಡಲಗಿ ಪಟ್ಟಣದಲ್ಲಿ  ಶಾಸಕರಾದ ಬಾಲಚಂದ್ರ ಜಾರಕಿಹೊಳಿ ನೇತೃತ್ವದಲ್ಲಿ ತಿರಂಗಾ ಯಾತ್ರೆ...
- Advertisement -

More Articles Like This

- Advertisement -
close
error: Content is protected !!
Join WhatsApp Group