Homeಸುದ್ದಿಗಳುಗುರುಭವನ ಕಾಮಗಾರಿ ವೀಕ್ಷಣೆ

ಗುರುಭವನ ಕಾಮಗಾರಿ ವೀಕ್ಷಣೆ

ಸವದತ್ತಿ: ತಾಲೂಕಿನಲ್ಲಿ ನಿರ್ಮಾಣವಾಗುತ್ತಿರುವ ಶಿಕ್ಷಕರ ಮಹತ್ವಾಕಾಂಕ್ಷಿ ಗುರುಭವನ ಕಾಮಗಾರಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಅರ್ಜುನ ಕಂಬೋಗಿ. ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ತಾಲೂಕ ಘಟಕದ ಅಧ್ಯಕ್ಷರಾದ ಎಚ್.ಆರ್.ಪೆಟ್ಲೂರ. ಪ್ರಧಾನ ಕಾರ್ಯದರ್ಶಿ ಎಫ್.ಜಿ.ನವಲಗುಂದ ಶಿಕ್ಷಣ ಸಂಯೋಜಕ ಎಂ.ಡಿ.ಹುದ್ದಾರ. ಕೆ.ಕೆ.ಡಂಗಿ ವೀಕ್ಷಿಸಿದರು.

ಕಾರಣಾಂತರಗಳಿಂದ ಕಾಮಗಾರಿ ಕುಂಠಿತಗೊಂಡಿತ್ತು. ಶಾಸಕ ಹಾಗೂ ವಿಧಾನಸಭಾ ಉಪ ಸಭಾಧ್ಯಕ್ಷ ಆನಂದ ಮಾಮನಿ ಹಾಗೂ ಮಾಜಿ ಅಧ್ಯಕ್ಷ ಸುರೇಶ ಬೆಳವಡಿಯವರ ಆಸಕ್ತಿಯ ಮೂಲಕ ಮತ್ತೆ ಕಾಮಗಾರಿ ಪುನರಾರಂಭಗೊಂಡಿದ್ದು ಮೇಲ್ಛಾವಣಿ ಹಂತದ ಕಾಮಗಾರಿಯವರೆಗೆ ಈಗ ಸಾಗಿದ್ದು ಶೀಘ್ರಗತಿಯಲ್ಲಿ ಕಾಮಗಾರಿ ಜರುಗಲಿ ಅದಕ್ಕೆ ಬೇಕಾದ ಎಲ್ಲ ಸಹಕಾರವನ್ನು ಇಲಾಖೆ ಮತ್ತು ಸಂಘಟನೆಯ ಮೂಲಕ ಜರುಗಿಸಲಾಗುವುದು ಎಂದು ಈ ಸಂದರ್ಭದಲ್ಲಿ ತಾಲೂಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಚ್.ಆರ್.ಪೆಟ್ಲೂರ ತಿಳಿಸಿದರು.

RELATED ARTICLES

Most Popular

error: Content is protected !!
Join WhatsApp Group