ವಿಶ್ವಭಾರತಿ ಪತ್ತಿನ ಸಂಘಕ್ಕೆ 6 ಲಕ್ಷ ರೂ. ನಿವ್ವಳ ಲಾಭ

Must Read

ಬಾಗಲಕೋಟೆ – ಸಾಲ ಪಡೆದ ಗ್ರಾಹಕರು ನಿಗದಿತ ಅವಧಿಯೊಳಗೆ ಸಾಲ ಮರುಪಾವತಿ ಮಾಡಿ ಸಹಕಾರಿ ಸಂಘಗಳ ಪ್ರಗತಿಗೆ ಸಹಕರಿಸಬೇಕು ಎಂದು  ವಿಶ್ವಭಾರತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘ ದ ಅಧ್ಯಕ್ಷ ಕೆ ಪಿ ಅರಿಷಿಣಗೋಡಿ  ಹೇಳಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲೂಕಿನ ಬೆನಕಟ್ಟಿ ಗ್ರಾಮದ ವಿಶ್ವಭಾರತಿ ಕ್ರೆಡಿಟ್ ಸೌಹಾರ್ದ ಸಹಕಾರಿ ಸಂಘದ 14 ನೆಯ ವಾರ್ಷಿಕ ಮಹಾಸಭೆಯಲ್ಲಿಅವರು ಮಾತನಾಡಿ, ಗ್ರಾಹಕರು ಪಡೆದ ಸಾಲವನ್ನು ಸದುಪಯೋಗ ಪಡಿಸಿಕೊಂಡು ಆರ್ಥಿಕ ಸಬಲತೆ ಸಾಧಿಸಬೇಕು ಎಂದರು.

ಜನರು ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳಲ್ಲಿ ಹೆಚ್ಚು ಹಣವನ್ನು ಠೇವಣಿ ಇಟ್ಟು ಬಡ್ಡಿ ಪಡೆಯುವ ಜೊತೆಗೆ ಬಡವರು, ಸಾಮಾನ್ಯ ವರ್ಗದ ಜನರಿಗೆ ಸಾಲ ಸೌಲಭ್ಯ ಒದಗಿಸಲು ನೆರವಾಗಬೇಕು ಎಂದು ಅರಿಷಿಣಗೋಡಿ ಹೇಳಿದರು.

ಸಂಘದ ವ್ಯವಸ್ಥಾಪಕ ಟಿ.ಏಚ್.ಸಣ್ಣಪ್ಪನವರ ಸಂಘದ ವರದಿ ಮಂಡಿಸಿ, ಸಂಘ ಕಳೆದ ಮಾರ್ಚ ಅಂತ್ಯಕ್ಕೆ 5.93 ಲಕ್ಷ ರೂ. ನಿವ್ವಳ ಲಾಭ ಗಳಿಸಿದೆ ಎಂದು ತಿಳಿಸಿದರು.

ಸಂಘದ ಆಡಳಿತ ಮಂಡಳಿ ಉಪಾಧ್ಯಕ್ಷ ರಂಗಣ್ಣ ಕಟಗೇರಿ, ಪಿಕೆಪಿಎಸ್ ಅಧ್ಯಕ್ಷ ವೇಮನ ಯಡಹಳ್ಳಿ, ಮಾಲತೇಶ ಅಮಾತೆಪ್ಪನವರ, ನಿರ್ದೇಶಕ ಗದಿಗೆಪ್ಪ ಅರಕೇರಿ,ಶಿವಾನಂದ ಅಂಗಡಿ ಮಾತನಾಡಿದರು. ಲಚ್ಚಪ್ಪ ಬಾಳಕ್ಕನವರ, ಪಾಂಡುರಂಗ ಸಣ್ಣಪ್ಪನವರ, ಮುತ್ತಪ್ಪ ಬೆನ್ನೂರ,ನೀಲಪ್ಪ ದಾಸಪ್ಪನವರ, ನಿಂಗಪ್ಪ ಶಿರೂರ, ರಾಘು ಯಡಹಳ್ಳಿ, ನಿರ್ದೇಶಕರಾದ ಹಣಮಂತ ತೆಗ್ಗಿ, ವೆಂಕಟೇಶ ತಿಮ್ಮಾಪುರ, ಕೃಷ್ಣಾ ಪಾಟೀಲ, ತಿಪ್ಪಣ್ಣ ಗುಳೇದ, ಹಣಮಂತ ವಾಲೀಕಾರ, ತಿಮ್ಮಣ್ಣ ಸಣ್ಣಪ್ಪನವರ ಇದ್ದರು.

Latest News

ಶರಣರ ಪೂಜೆ ಮಾಡುವುದಕ್ಕಿಂತ ತತ್ವ ಅಳವಡಿಸಿಕೊಳ್ಳಬೇಕು

ಸಿಂದಗಿ; ೧೨ನೇ ಶತಮಾನದಲ್ಲಿ ಸಮ ಸಮಾಜದ ನಿರ್ಮಾಣ ಮಾಡಿದ ಶರಣರ ಜಯಂತಿಗಳ ಮೂಲಕ ಭಾವ ಚಿತ್ರಗಳನ್ನು ಪೂಜೆ ಮಾಡುವುದಕ್ಕಿಂತಲೂ ಶರಣರ ತತ್ವ ಸಿದಾಂತಗಳನ್ನು ನಾವೆಲ್ಲರು ಮೈಗೂಡಿಸಿಕೊಂಡು...

More Articles Like This

error: Content is protected !!
Join WhatsApp Group