ಬೆಳಗಾವಿ: ತಾಲೂಕಿನ ಮಾಸ್ತ ಮರಡಿ ಗ್ರಾಮದ ಸರಕಾರಿ ಮಾದರಿ ಪ್ರಾಥಮಿಕ ಕನ್ನಡ ಶಾಲೆಗೆ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಜಿಲ್ಲಾ ಉಪನಿರ್ದೇಶಕರ ಕಾರ್ಯಾಲಯದ ಜಿಲ್ಲಾ ಎಸ್ ಎಸ್ ಎ ಉಪ ಯೋಜನಾಧಿಕಾರಿಗಳಾದ ಬಸವರಾಜ ಮಿಲ್ಲಾನಟ್ಟಿ ಹಾಗೂ ಕೆ ಎಸ್ ನಂದೇರ ರವರು ಇಂದು ಮುಂಜಾನೆ ಭೇಟಿ ನೀಡಿ ಶಾಲೆಯ ಕಾರ್ಯ ಚಟುವಟಿಕೆಗಳನ್ನು ಗಮನಿಸಿ ಸೂಕ್ತ ಮಾರ್ಗದರ್ಶನ ಮಾಡಿದರು.
ಶಾಲೆಯ ವಿದ್ಯಾರ್ಥಿಗಳ ಶೈಕ್ಷಣಿಕ ಚಟುವಟಿಕೆಗಳನ್ನು ನೋಡಿದರು ಹಾಗೂ ಶಾಲೆಯ ವಾತಾವರಣ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ವಿದ್ಯಾಪ್ರವೇಶ ಹಾಗೂ ಕಲಿಕಾ ಚೇತರಿಕೆ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು ಜೊತೆಗೆ ವಿದ್ಯಾರ್ಥಿಗಳಿಗೆ ಗುಣಾತ್ಮಕ ಶಿಕ್ಷಣ ದೊರೆಯುವಂತೆ ಶ್ರಮ ವಹಿಸಿ ಆಸಕ್ತಿಯಿಂದ ಕಾರ್ಯ ನಿರ್ವಹಿಸುವಂತೆ ಶಿಕ್ಷಕರಿಗೆ ಕಿವಿಮಾತು ಹೇಳಿದರು. ಶಾಲಾ ಶಿಕ್ಷಣ ಹಾಗೂ ಸಾಕ್ಷಾರತಾ ಇಲಾಖೆಯ ಆದೇಶದಂತೆ ಶಾಲೆಯಲ್ಲಿ ಜರುಗಿದ ಅಜಾದಿ ಕಾ ಅಮೃತ ಮಹೋತ್ಸವದ ನಿಮಿತ್ತ ವರ್ಗವಾರು ವಿದ್ಯಾರ್ಥಿಗಳ ಛದ್ಮವೇಷ (ಫ್ಯಾನ್ಸಿ ಡ್ರೆಸ್ ಸ್ಪರ್ಧೆ) ಸ್ಪರ್ಧೆಯಲ್ಲಿ ಪಾಲ್ಗೊಂಡವರೊ0ದಿಗೆ ಭಾವಚಿತ್ರ ತೆಗೆಸಿಕೊಂಡು ಅವರ ಪ್ರತಿಭಾ ಪ್ರದರ್ಶನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಶಾಲೆಯ ಹಿರಿಯ ಮುಖ್ಯೋಪಾಧ್ಯಾಯರಾದ ಬಸವರಾಜ ಸುಣಗಾರ ರವರು ಶಾಲೆಯ ಶೈಕ್ಷಣಿಕ ಹಾಗೂ ಭೌತಿಕ ಮಾಹಿತಿ ನೀಡಿದರು. ಶಾಲಾ ಶಿಕ್ಷಕ ಶಿಕ್ಷಕಿಯರು ಉಪಸ್ಥಿತರಿದ್ದರು.