- Advertisement -
ಸಿಂದಗಿ; ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಯ ವಿಧಾನ ಪರಿಷತ್ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಡಿಸೆಂಬರ್ 03 ರಂದು ಮಧ್ಯಾಹ್ನ 02:00 ಗಂಟೆಗೆ ಪಟ್ಟಣದ ವಿಜಯಪುರ ರಸ್ತೆಯ ಮಾಂಗಲ್ಯ ಭವನದಲ್ಲಿ ಮತಕ್ಷೇತ್ರದ ಗ್ರಾಮ ಪಂಚಾಯತಿ ಹಾಗೂ ಪುರಸಭೆ ಸದಸ್ಯರ ಸಭೆ ಕರೆಯಲಾಗಿದೆ ಎಂದು ಮಾಧ್ಯಮ ಪ್ರಮುಖ ಸುದರ್ಶನ ಜಿಂಗಣ್ಣಿ ತಿಳಿಸಿದ್ದಾರೆ.
ಈ ಸಭೆಗೆ ಸಚಿವರಾದ ಗೋವಿಂದ ಕಾರಜೋಳ, ಸಂಸದರಾದ ರಮೇಶ ಜಿಗಜಿಣಗಿ, ಸಿಂದಗಿ ಶಾಸಕರಾದ ರಮೇಶ ಭೂಸನೂರ, ವಿಧಾನಪರಿಷತ್ ಬಿಜೆಪಿ ಅಭ್ಯರ್ಥಿ ಪಿ. ಎಚ್. ಪೂಜಾರ ಬಿಜೆಪಿ ಜಿಲ್ಲಾಧ್ಯಕ್ಷರಾದ ಆರ್. ಎಸ್. ಪಾಟೀಲ ಕೂಚಬಾಳ ಸೇರಿದಂತೆ ಪಕ್ಷದ ಪ್ರಮುಖರು, ಮತ್ತಿತರರು ಆಗಮಿಸಲಿದ್ದಾರೆ.