ಶನಿವಾರದಂದು ಇಬಾಹ್ರಿಂ ಸುತಾರ ಕುರಿತು ವೆಬಿನಾರ್ ಆಯೋಜನೆ

Must Read

ಬೆಳಗಾವಿ : ಇತ್ತೀಚೆಗೆ ನಮ್ಮನ್ನಗಲಿದ ಕನ್ನಡ ನಾಡಿನ ಶ್ರೇಷ್ಠ ಪ್ರವಚನಕಾರ ಪದ್ಮಶ್ರೀ ಪುರಸ್ಕೃತ ಇಬ್ರಾಹಿಂ ಸುತಾರ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವದರ ಜೊತೆಗೆ ಅವರ ಜೀವನ ಸಂದೇಶದ ಕುರಿತು ಶನಿವಾರ ದಿನಾಂಕ ೧೨ ರಂದು ಸಂಜೆ ೫ ಗಂಟೆಗೆ ಕಸಾಪ ಚಿಕ್ಕೋಡಿ ತಾಲೂಕಾ ಘಟಕದಿಂದ ವೆಬಿನಾರನ್ನು ಗೂಗಲ್ ಮೀಟ್ ಮುಖಾಂತರ ಆಯೋಜಿಸಲಾಗಿದೆ ಎಂದು ಕಸಾಪ ಚಿಕ್ಕೋಡಿ ತಾಲೂಕಾ ಅಧ್ಯಕ್ಷ ಡಾ.ಸುರೇಶ ಉಕ್ಕಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ರಬಕವಿ ಹಿರಿಯ ಸಾಹಿತಿ ಮಲ್ಲಿಕಾರ್ಜುನ ಹುಲಗಬಾಳಿ ಇಬ್ರಾಹಿಂ ಸುತಾರ ಅವರ ಜೀವನ ಸಂದೇಶದ ಕುರಿತು ಉಪನ್ಯಾಸ ನೀಡಲಿದ್ದಾರೆ. ಕಸಾಪ ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಶ್ರೀಮತಿ ಮಂಗಲಾ ಮೆಟಗುಡ್ಡ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. http//meet.google.com/mdd-pdue-veh ಈ ಕೊಂಡಿ ಬಳಸಿಕೊಂಡು ವೆಬಿನಾರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಸಂಯೋಜಕರಾದ ಕಸಾಪ ಚಿಕ್ಕೋಡಿ ತಾಲೂಕಾ ಅಧ್ಯಕ್ಷ ಡಾ.ಸುರೇಶ ಉಕ್ಕಲಿ ವಿನಂತಿಸಿದ್ದಾರೆ.

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group