- Advertisement -
ಮೂಡಲಗಿ – ೧೨ ನೇ ಶತಮಾನದಲ್ಲಿ ಸಮಾನತೆ ಹಾಗೂ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಪರಿಚಯಿಸಿದ ಜಗಜ್ಯೋತಿ ಶ್ರೀ ಬಸವೇಶ್ವರರ ಪ್ರತಿಮೆಯನ್ನು ವಿಧಾನ ಸೌಧ ಆವರಣದಲ್ಲಿ ನಿರ್ಮಾಣ ಮಾಡುತ್ತಿರುವ ಸರ್ಕಾರದ ನಿರ್ಧಾರವನ್ನು ಲಿಂಗಾಯತ ಪಂಚಮಸಾಲಿ ಅಭಿವೃದ್ಧಿ ಸಮಿತಿಯ ತಾಲೂಕಾ ಅಧ್ಯಕ್ಷ ಬಸವರಾಜ ಪಾಟೀಲ ಹಾಗೂ ಯುವ ಮುಖಂಡ ಈಶ್ವರ ಢವಳೇಶ್ವರ ಸ್ವಾಗತಿಸಿದ್ದಾರೆ.
ಪ್ರತಿಮೆ ಸ್ಥಾಪನೆಯಿಂದ ವಿಧಾನ ಸೌಧಕ್ಕೆ ಮೆರುಗು ಬರುತ್ತದೆ. ಇಂಥ ಮಹಾನ್ ಕಾರ್ಯ ಕೈಗೊಂಡ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅಭಿನಂದನಾರ್ಹರು ಎಂದು ಅವರು ತಿಳಿಸಿದ್ದಾರೆ.