spot_img
spot_img

ಬೀದರ ; ಬಿಜೆಪಿ – ಕಾಂಗ್ರೆಸ್ ಕಾರ್ಯಕರ್ತರಲ್ಲಿ ವಾಗ್ವಾದ

Must Read

spot_img
- Advertisement -

ಬೀದರ – ಜಿಲ್ಲೆಯ ಹುಮನಾಬಾದ ತಾಲೂಕು ಹಳ್ಳಿಖೇಡ ಬಿ ಗ್ರಾಮದ ಪುರಸಭೆಯ ನೂತನ ಕೊಠಡಿ ಉದ್ಘಾಟನೆ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿದ್ದು ಸ್ಥಳೀಯ ಸಿದ್ದು ಪಾಟೀಲ ಹಾಗೂ ರಾಜಶೇಖರ ಪಾಟೀಲ ಸಹೋದರರ ನಡುವಿನ ಶೀತಲ ಸಮರ ಮುಂದುವರೆದ ಸೂಚನೆ ಸಿಕ್ಕಂತಾಗಿದೆ.

ಪುರಸಭೆಯ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಾಜಶೇಖರ ಪಾಟೀಲ ಭಾಗಿಯಾಗಿದ್ದರು. ಈ ವೇಳೆ ಶಿಷ್ಟಾಚಾರ ಪಾಲನೆಯಾಗಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿದರು.

ಪುರಸಭೆಗೆ ದಲಿತ ಮಹಿಳೆ ಅಧ್ಯಕ್ಷೆಯಾಗಿದ್ದನ್ನು ಬಿಜೆಪಿ ಸಹಿಸುತ್ತಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಯಾಗಿ ಗಲಾಟೆ ಆರಂಭಿಸಿದರು. ಇದು ಮುಂದುವರೆದು ಮಾತಿನ ಚಕಮಕಿಯಾಗಿ ಕಾರ್ಯಕರ್ತರು ಪರಸ್ಪರ ತಳ್ಳಾಟದಲ್ಲಿ ತೊಡಗಿದರು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಪೊಲೀಸರು ತಡೆದು ನಿಯಂತ್ರಿಸಿದರು.

- Advertisement -

ನಂತರ ಪರಸ್ಪರರ ಮೇಲೆ ದೂರುಗಳು ದಾಖಲಾಗಿದ್ದು ಹುಮನಾಬಾದ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.

ವರದಿ ; ನಂದಕುಮಾರ ಕರಂಜೆ, ಬೀದರ

- Advertisement -
- Advertisement -

Latest News

 ದಿ. 9 ರಂದು ಕಪ್ಪತಗುಡ್ಡದಲ್ಲಿ 9 ನೇ “ಮಾಸಿಕ ಚಾರಣ ಸಂಭ್ರಮ ಹಾಗೂ ಸಸ್ಯಾನುಭಾವ”

ಗದಗ - ಚಾರಣ ಪ್ರಿಯರು ಮತ್ತು ಸಸ್ಯ ಪ್ರಬೇಧಗಳ ಅಧ್ಯಯನ ನಡೆಸಲು ಕ್ಷೇತ್ರಭೇಟಿ ನೀಡಬಯಸುವ ಸಂಶೋಧನಾಕಾರರಿಗೆ, ಅಧ್ಯಾಪಕರಿಗೆ, ಶಿಕ್ಷಕರಿಗೆ, ವಿದ್ಯಾರ್ಥಿಗಳಿಗೆ, ಆಯುರ್ವೇದ ಹಾಗೂ ಪಾರಂಪರಿಕ ವೈದ್ಯರಿಗೆ,...
- Advertisement -

More Articles Like This

- Advertisement -
close
error: Content is protected !!
Join WhatsApp Group