ಬೀದರ ; ಬಿಜೆಪಿ – ಕಾಂಗ್ರೆಸ್ ಕಾರ್ಯಕರ್ತರಲ್ಲಿ ವಾಗ್ವಾದ

Must Read

ಬೀದರ – ಜಿಲ್ಲೆಯ ಹುಮನಾಬಾದ ತಾಲೂಕು ಹಳ್ಳಿಖೇಡ ಬಿ ಗ್ರಾಮದ ಪುರಸಭೆಯ ನೂತನ ಕೊಠಡಿ ಉದ್ಘಾಟನೆ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ವಾಗ್ವಾದ ಉಂಟಾಗಿದ್ದು ಸ್ಥಳೀಯ ಸಿದ್ದು ಪಾಟೀಲ ಹಾಗೂ ರಾಜಶೇಖರ ಪಾಟೀಲ ಸಹೋದರರ ನಡುವಿನ ಶೀತಲ ಸಮರ ಮುಂದುವರೆದ ಸೂಚನೆ ಸಿಕ್ಕಂತಾಗಿದೆ.

ಪುರಸಭೆಯ ಕಟ್ಟಡ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಾಜಶೇಖರ ಪಾಟೀಲ ಭಾಗಿಯಾಗಿದ್ದರು. ಈ ವೇಳೆ ಶಿಷ್ಟಾಚಾರ ಪಾಲನೆಯಾಗಿಲ್ಲ ಎಂದು ಬಿಜೆಪಿ ಕಾರ್ಯಕರ್ತರು ಗಲಾಟೆ ಮಾಡಿದರು.

ಪುರಸಭೆಗೆ ದಲಿತ ಮಹಿಳೆ ಅಧ್ಯಕ್ಷೆಯಾಗಿದ್ದನ್ನು ಬಿಜೆಪಿ ಸಹಿಸುತ್ತಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರು ಪ್ರತಿಯಾಗಿ ಗಲಾಟೆ ಆರಂಭಿಸಿದರು. ಇದು ಮುಂದುವರೆದು ಮಾತಿನ ಚಕಮಕಿಯಾಗಿ ಕಾರ್ಯಕರ್ತರು ಪರಸ್ಪರ ತಳ್ಳಾಟದಲ್ಲಿ ತೊಡಗಿದರು. ಪರಿಸ್ಥಿತಿ ವಿಕೋಪಕ್ಕೆ ಹೋಗುವುದನ್ನು ಪೊಲೀಸರು ತಡೆದು ನಿಯಂತ್ರಿಸಿದರು.

ನಂತರ ಪರಸ್ಪರರ ಮೇಲೆ ದೂರುಗಳು ದಾಖಲಾಗಿದ್ದು ಹುಮನಾಬಾದ ಪೊಲೀಸರು ವಿಚಾರಣೆ ಕೈಗೊಂಡಿದ್ದಾರೆ.

ವರದಿ ; ನಂದಕುಮಾರ ಕರಂಜೆ, ಬೀದರ

Latest News

ಗುಣಾತ್ಮಕ ಶಿಕ್ಷಣದ ಮೌಲ್ಯವನ್ನು ಪ್ರತಿಬಿಂಬಿಸಿದ ಜ್ಞಾನ ಗಂಗೋತ್ರಿಯ ವಾರ್ಷಿಕ ಸ್ನೇಹ ಸಮ್ಮೇಳನ

ಸಂಸ್ಕಾರ ಮತ್ತು ಸಾಧನೆಯ ಅನನ್ಯ ಸಂಗಮವಾಗಿ ಮೂಡಿಬಂದ ‘ಸ್ಪಂದನ’ ಕಾರ್ಯಕ್ರಮಮೂಡಲಗಿ: ಕಳೆದ ಹಲವು ವರ್ಷಗಳಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಶೇಕಡಾ ೧೦೦ರಷ್ಟು ಫಲಿತಾಂಶ ದಾಖಲಿಸುತ್ತಾ ಬಂದಿರುವ ರಾಜಾಪೂರ...

More Articles Like This

error: Content is protected !!
Join WhatsApp Group