ಶಕ್ತಿನಗರದ ಕ್ಯಾಷುಟೆಕ್ ನಿರ್ಮಿತಿ ಕೇಂದ್ರ ಹಾಗೂ ಮಾನವಿಯ ಸರಕಾರಿ ಪದವಿ ಪೂರ್ವ ಕಾಲೇಜಿನ ಸಹಯೋಗದಲ್ಲಿ ಜರುಗಿದ ಕಾರ್ಯಾಗಾರದ ಅಧ್ಯಕ್ಷತೆಯನ್ನು ಪ್ರಭಾರಿ ಪ್ರಾಚಾರ್ಯ ಅಬ್ದುಲ್ ಹಸನ್ ರವರು ವಹಿಸಿದ್ದರು.
ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿದ್ದ ಭಾಲಚಂದ್ರ ಜಾಬಶೆಟ್ಟಿಯವರನ್ನು ಉಪನ್ಯಾಸಕ ಸತೀಶ ರವರು ಸಭೆಗೆ ಪರಿಚಯಿಸಿದರು.
ಕ್ಯಾಷುಟೆಕ್ ನಿರ್ಮಿತಿ ಕೇಂದ್ರದ ತರಬೇತಿ ಸಲಹೆಗಾರ ಭಾಲಚಂದ್ರ ಜಾಬಶೆಟ್ಟಿ ನೀಡಿದ ಉಪನ್ಯಾಸದಲ್ಲಿ ಸೂರ್ಯನಿಂದ ಉಚಿತವಾಗಿ ದೊರೆಯುವ ಸೂರ್ಯನ ಬೆಳಕಿನಿಂದ ವಿದ್ಯುತ್ ಉತ್ಪಾದಿಸುವ ಕುರಿತು ಸಮಗ್ರ ಮಾಹಿತಿ ನೀಡಿದರು.
ಕೇಂದ್ರ ಸರಕಾರವು ಘೋಷಿಸಿದ “ಸೂರ್ಯ ಘರ” ಯೋಜನೆಯ ಕುರಿತು ವಿವರಿಸಿದ ಅವರು, ಫೋಟೋ- ವೋಲ್ಟಾಯಿಕ್ ಸೆಲ್ ಗಳನ್ನು ಉತ್ಪಾದಿಸುವ ನಿಟ್ಟಿನಲ್ಲಿ ಆಗುತ್ತಿರುವ ಸಂಶೋಧನೆ ಹಾಗೂ ಅದರಿಂದಾಗಿ ಮಾಳಿಗೆಯ ಮೇಲೆ ಅಳವಡಿಸುತ್ತಿರುವ ಸೋಲಾರ ವಿದ್ಯುತ್ ಉತ್ಪಾದನಾ ಘಟಕಗಳ ಸ್ಥಾಪನಾ ವೆಚ್ಚದಲ್ಲಿ ಗಣನೀಯ ಇಳಿಕೆಯನ್ನು ಗಮನಿಸಬಹುದು, ಜೊತೆಗೆ ಮೂರು ಕಿಲೋ ವ್ಯಾಟ್ ಉತ್ಪಾದನಾ ಘಟಕಗಳಿಗೆ ಸರಕಾರದಿಂದ ರೂ. 78000/- ಗಳ ಸಹಾಯಧನ ದೊರೆಯುವ ಕುರಿತು ವಿವರಣೆ ನೀಡಿದರು.
ಸೋಲಾರ ಪ್ಯಾನೆಲಗಳ ಗುಣಮಟ್ಟ ಸುಧಾರಣೆಗಳಿಗೆ ನಡೆಯುತ್ತಿರುವ ಸಂಶೋಧನೆ ಕುರಿತು ವಿವರಣೆ ನೀಡುವ ಸಂದರ್ಭದಲ್ಲಿ, ಪ್ರಥಮದಲ್ಲಿನ ಪಾಲಿಕ್ರಷ್ಟಲೈನ್, ಮೋನೋಕ್ರಷ್ಟಲೈನ್, ಮೋನೋಕ್ರಷ್ಟಲೈನ್ ಪರ್ಕ, ಮೋನೋಕ್ರಷ್ಟಲೈನ್ ಪರ್ಕ ಹಾಫ್ ಕಟ್, ಬೈಫೇಸಿಯಲ್, ಟಾಪ್ ಕಾನ್, ಹಾಗೂ ಎಚ್.ಜೆ.ಟಿ. ಮುಂತಾದ ಸೌರಫಲಕಗಳ ಕುರಿತು ತಾಂತ್ರಿಕ ಮಾಹಿತಿ ನೀಡಿದರು, ವಿವಿಧ ಸೌರಫಲಕಗಳನ್ನು ಅಳವಡಿಸಿ ಉತ್ಪಾದಿಸಬಹುದಾದ ಗರಿಷ್ಟ ವಿದ್ಯುಚ್ಛಕ್ತಿ ಪ್ರಮಾಣದ ಕುರಿತು ಅಂಕಿ ಸಂಖ್ಯೆ ಗಳನ್ನಾಧರಿಸಿದ ವಿಷಯ ಮಂಡಿಸಿದರು.
ಸೌರಫಲಕಗಳಿಂದ ಗರಿಷ್ಠ ವಿದ್ಯುತ್ ಉತ್ಪಾದನೆಗಾಗಿ ಅಳವಡಿಸಬಹುದಾದ ಇತರೆ ಉಪಘಟಕಗಳಾದ ಡಿಸಿಡಿಬಿ, ಎಸಿಡಿಬಿ, ಸೂಲಾರ ಇನ್ವರ್ಟರ್, ಲೈಟನಿಂಗ್ ಅರೆಸ್ಟರ್, ರಾಸಾಯನಿಕ ವಿದ್ಯುತ್ ವಾಹಕ ಗುಂಡಿ ಅಳವಡಿಕೆ, ಸ್ಟ್ರಕ್ಚರ್ ಗಳ ನಿರ್ಮಾಣ, ನೆಟ್ ಮೀಟರಿಂಗ್, ಹಾಗೂ ಅಳವಡಿಕೆ ಮಾಡಲು ತಗಲುವ ಖರ್ಚುವೆಚ್ಚಗಳ ಕುರಿತು ಸಮಗ್ರ ಮಾಹಿತಿ ನೀಡಿದರು.
ಸೌರಫಲಕಗಳ ಅಳವಡಿಕೆಯ ದಿಕ್ಕು, ‘ಟಿಲ್ಟ್ ಆ್ಯಂಗಲ್’, ‘ಅಝಮತ್ ಆ್ಯಂಗಲ್’ ಗಳ ಕುರಿತು ವಿವರವಾದ ಮಾಹಿತಿಯನ್ನು ನೀಡಿದರು. ಹಾಗೆ ಮಾಡುವುದರಿಂದ ದೊರೆಯುವ ಪ್ರಯೋಜನಗಳ ಕುರಿತೂ ಸಹ ವಿವರಿಸಿದರು.
ಸೌರಫಲಕಗಳ ರಚನೆ, ವಿವಿಧ ತಂತ್ರಜ್ಞಾನಗಳ ಅಳವಡಿಕೆಯಿಂದ ಉತ್ಪಾದನಾ ವಿಧಾನಗಳ ಕುರಿತು ವಿವರಿಸಿದರು.
ಪ್ರಭಾರಿ ಪ್ರಾಚಾರ್ಯ ಅಬ್ದುಲ್ ಹಸನ್ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಮುಂದಿನ ಪೀಳಿಗೆಯ ಹಾಗೂ ಜಾಗತಿಕ ಮಾಲಿನ್ಯ ತಡೆಯುವ ನಿಟ್ಟಿನಲ್ಲಿ ಹಾಗೂ ಇಂಧನ ಸುಸ್ಥಿರತೆಗಾಗಿ ಸೂರ್ಯಕಿರಣಾಧಾರಿಯ ವಿದ್ಯುತ್ ಉತ್ಪಾದಿನೆಯಲ್ಲಿ ಕೈಜೋಡಿಸುವುದು ಪ್ರತಿಯೊಬ್ಬ ಭಾರತೀಯನ ಕರ್ತವ್ಯವಾಗಿದೆಯೆಂದರು
ಕಾಲೇಜಿನ ಪರವಾಗಿ ಭಾಲಚಂದ್ರ ಜಾಬಶೆಟ್ಟಿಯವರನ್ನು ಸನ್ಮಾನಿಸಲಾಯಿತು
ಉಪನ್ಯಾಸಕರುಗಳಾದ ಸತೀಶ, ಸಯ್ಯೆದಾ ನಾಝ್ನೀನ್ ಬೇಗಮ್, ರಾಜಕುಮಾರ ಶೆಟ್ಟಿ, ಶಂಕರಗೌಡ, ಕರಿಯಪ್ಪ, ವೆಂಕೋಬಾ, ಸಚಿತ ಉತ್ಕಂಠ, ಕ್ಯಾಷುಟೆಕ್ ನ ಯೋಜನಾ ಅಭಿಯಂತರ ಅನಿಲ ಕುಲಕರ್ಣಿ, ಸಂಶೋಧನಾ ಅಭಿಯಂತರ ಸುರೆಂದ್ರ ಪಾಟೀಲ ಉಪಸ್ಥಿತರಿದ್ದರು