spot_img
spot_img

ಯಾದವಾಡ: ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ರಥೋತ್ಸವ

Must Read

- Advertisement -

ಮೂಡಲಗಿ: ತಾಲೂಕಿನ ಯಾದವಾಡದಲ್ಲಿ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ಜಾತ್ರಾ ಮಹೋತ್ಸವು ಈ ವರ್ಷ ಏ.2 ರಿಂದ 12 ರವರಿಗೆ ಜರುಗುತ್ತಿರುವ ನಿಮಿತ್ತ ಗುರುವಾರದಂದು ಚೌಕಿಮಠದ ಪ.ಪೂ ಶ್ರೀ ಶಿವಯೋಗಿ ದೇವರು ಸಾನ್ನಿಧ್ಯದಲ್ಲಿ ಹಾಗೂ ಶ್ರೀ ಘಟಗಿ ಬಸವೇಶ್ವರ ದೇವಸ್ಥಾನ ಅಭಿವೃದ್ಧಿ ಸೇವಾ ಸಮಿತಿ ಆಶ್ರಯದಲ್ಲಿ ಸಡಗರ ಸಂಭ್ರಮದಿಂದ ಅಪಾರ ಜನಸ್ತೋಮದ ಜಯಘೋಷಣೆಯಲ್ಲಿ ಶ್ರೀ ಚೌಕೇಶ್ವರ ಹಾಗೂ ಘಟ್ಟಗಿ ಬಸವೇಶ್ವರ ರಥೋತ್ಸವ ಜರುಗಿತು.

ಗುರುವಾರದಂದು ಯಾದವಾಡ ಕ್ಷೇತ್ರಾಧಿಪತಿ ಶ್ರೀ ಚೌಕೇಶ್ವರ ಹಾಗೂ ಶ್ರೀ ಘಟ್ಟಗಿ ಬಸವೇಶ್ವರ ಮೂರ್ತಿಗಳಿಗೆ ವಿಶೇಷ ಅಭಿಷೇಕ ಮತ್ತು ಪೂಜೆ ಹಾಗೂ ಹೂ ಪುಷ್ಪಗಳಿಂದ ಶೃಂಗರಿಸಲಾಗಿತ್ತು 

ಸಂಜೆ ಯಾದವಾಡ ಗ್ರಾಮದ ಚೌಕೇಶ್ವರ ಮಂದಿರದಿಂದ ಬಸ್ ನಿಲ್ದಾಣ ಹತ್ತಿರದ ಹೊನ್ನಮ್ಮ ಪಾದಗಟ್ಟೆಯವರೆಗೆ ಮತ್ತು ಬಸವೇಶ್ವರ ದೇವಸ್ಥಾನದವರೆಗೆ ಶ್ರೀ ಚೌಕೇಶ್ವರ ರಥೋತ್ಸವ ಜರುಗಿತು ನಂತರ ಘಟಗಿ ಬಸವೇಶ್ವರ ದೇವಸ್ಥಾನ ಹತ್ತಿರ ತಳಿರು ತೋರಣ, ಬೃಹದಾಕಾರದ ರುದ್ರಾಕ್ಷಿ ಹಾಗೂ ಹೂ ಮಾಲೆಗಳಿಂದ ಶೃಂಗರಿಸಿದ ಶ್ರೀ ಘಟಗಿ ಬಸವೇಶ್ವರ ರಥೋತ್ಸವಕ್ಕೆ ಶ್ರೀಗಳು ಪೂಜೆ ಸಲ್ಲಿಸಿದ ನಂತರ ಅಪಾರ ಜನಸ್ತೋಮದ ಜಯಘೋಷಣೆ ಮಧ್ಯದಲ್ಲಿ ಶ್ರೀ ಘಟಗಿ ಬಸವೇಶ್ವರ ರಥೋತ್ಸವ ಬಸವನ ಕಟ್ಟೆ ವರೆಗೆ ಸಾಗಿ ಮರಳಿ ದೇವಸ್ಥಾನಕ್ಕೆ ಆಗಮಿಸಿತು

- Advertisement -

ಭಕ್ತರು ರಥೋತ್ಸವಕ್ಕೆ ಬಾಳೆ ಹಣ್ಣು, ಬೆಂಡು-ಬೆತ್ತಾಸು, ಕಾರೀಕು, ತೆಂಗಿನಕಾಯಿ ಹಾರಿಸಿ ತಮ್ಮ ಹರಕೆಯನ್ನು ತೀರಿಸಿ ಪುನೀತರಾದರು. ರಥೋತ್ಸವದಲ್ಲಿ ಝಾಂಜ ಪಥಕ, ಕರಡಿ ಮೇಳಗಳು ಮೆರುಗು ನೀಡಿದವು.  

ಈ ಸಂಧರ್ಭದಲ್ಲಿ ಜಾತ್ರಾ ಕಮಿಟಿ ಪದಾಧಿಕಾರಿಗಳು ಹಾಗೂ ಯಾದವಾಡ, ಕೊಪ್ಪದಟ್ಟಿ, ಕಾಮನಕಟ್ಟಿ, ಗಿರಿಸಾಗರ, ಗುಲಗೋಜಿಕೊಪ್ಪ, ಕುರಬಟ್ಟಿ, ಮಾನೋಮ್ಮಿ ಸೇರಿದಂತೆ ವಿವಿಧ ಊರುಗಳ ಭಕ್ತರು ಪಾಲ್ಗೊಂಡಿದರು.

- Advertisement -
- Advertisement -

Latest News

ಜಾತ್ರೆಗಳು ಜಾನಪದ ಕಲೆ, ಸಂಪ್ರದಾಯ, ಆಚರಣೆಗಳ ತೊಟ್ಟಿಲು

ಮೂಡಲಗಿ: ‘ಜನಪದರು ಸೇರಿ ದೈವೀಆರಾಧನೆಯೊಂದಿಗೆ ಜಾತಿ, ಧರ್ಮ, ಮೇಲು, ಕೀಳು ಭೇದ ಬಿಟ್ಟು ಸಾಮರಸ್ಯವನ್ನು ಬೆಳೆಸುವುದೇ ಜಾತ್ರೆಗಳಾಗಿವೆ’ ಎಂದು ಸಾಹಿತಿ, ಪತ್ರಕರ್ತ ಬಾಲಶೇಖರ ಬಂದಿ ಹೇಳಿದರು. ತಾಲ್ಲೂಕಿನ...
- Advertisement -

More Articles Like This

- Advertisement -
close
error: Content is protected !!
Join WhatsApp Group