ರೈಲ್ವೆ ಅಪಘಾತ ತಪ್ಪಿಸಿದ ಯುವಕರು

Must Read

ಬೆಳಗಾವಿ – ಬೆಳಗಾವಿಯ ದೂದ್ ಸಾಗರದ ಬಳಿ ಭಾರಿ ಮಳೆಯಿಂದಾಗಿ ಮರವೊಂದು ರೈಲ್ವೆ ಹಳಿಯ ಮೇಲೆ ಬಿದ್ದಿದ್ದರಿಂದ ಉಂಟಾಗಬಹುದಾಗಿದ್ದ ಅಪಘಾತವನ್ನು ತಪ್ಪಿಸಿದ ಯುವಕರ ಬಗ್ಗೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

ಈ ಘಟನೆ ಸೋಮವಾರ ನಡೆದಿದೆ.

ಬೆಂಗಳೂರಿನ ಯುವ ಮುಖಂಡರಾದ ಬಿ ಎಲ್ ಹರೀಶ್ ಅವರ ಪುತ್ರ ಪ್ರಜ್ವಲ್ ಶೆಟ್ಟಿ ಮತ್ತು ಅವರ ಸಹೋದರರ ಮಕ್ಕಳು ದೂದ್ ಸಾಗರ ಜಲಪಾತ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ಈ ಯುವಕರು ಬೆಂಗಳೂರಿಗೆ ಮರಳುವುದಕ್ಕಾಗಿ ರೈಲ್ವೆ ನಿಲ್ದಾಣದತ್ತ ಹಳಿಯ ಪಕ್ಕದಿಂದ ನಡೆದುಕೊಂಡು ಹೋಗುತ್ತಿದ್ದರು ಈ ವೇಳೆ ಗುಡ್ಡದ ಮೇಲಿಂದ ಬಾರಿ ಗಾತ್ರದ ಮರವೊಂದು ಹಳಿಯಮೇಲೆ ಉರುಳಿಬಿದ್ದಿತು ಇದನ್ನು ಗಮನಿಸಿದ ಯುವಕರ ತಂಡ ಅದೇ ಸಮಯದಲ್ಲಿ ಕೊಂಚ ದೂರದಲ್ಲಿ ಬರುತ್ತಿದ್ದ ರೈಲಿಗೆ ಕೆಂಪು ಆಂಗಿ, ಪ್ಲಾಸ್ಟಿಕ್ ಮೊದಲಾದುವುಗಳನ್ನು ತೋರಿಸಿದರು ಇದನ್ನು ಗಮನಿಸಿದ ಚಾಲಕ ಬ್ರೇಕ್ ಹಾಕಿದ್ದರಿಂದ ರೈಲು ಮರದ ಸಮೀಪವೇ ಬಂದು ನಿಂತಿತು.

ಇದರಿಂದ ಆಗಬಹುದಾದ ದೊಡ್ಡ ಅಪಘಾತವನ್ನು ತಪ್ಪಿದೆ.

ಸಮಯಪ್ರಜ್ಞೆ ತೋರಿ ಮುಂದಾಗಬಹುದಾಗಿದ್ದ ಅವಘಡವನ್ನು ತಪ್ಪಿಸಿದ ಯುವಕರ ಕಾರ್ಯಕ್ಕೆ ರೈಲ್ವೆ ಇಲಾಖೆ ಸೇರಿದಂತೆ ಎಲ್ಲಡೆ ಪ್ರಶಂಸೆ ವ್ಯಕ್ತವಾಗಿದೆ.


Mallikarjuna Polkal
9060145533

Latest News

ಯಶಸ್ವಿ ಹಾಸನಾಂಬ ಫಿಲಂ ಫೆಸ್ಟಿವಲ್

ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮ್ಯಾಕ್ಸ್ ಕಾನ್, ಡ್ರೀಮ್ ಸ್ಟುಡಿಯೋ ಎಂಟರ್ಟೈನ್ಮೆಂಟ್, ವೆಂಚರ್ ಮೂವೀಸ್  ವತಿಯಿಂದ ಹಾಸನಾಂಬ ಚಲನಚಿತ್ರೋತ್ಸವ 2025 ಕಾರ್ಯಕ್ರಮವನ್ನು...

More Articles Like This

error: Content is protected !!
Join WhatsApp Group